Romans 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
Kannada BSI Bible 2016
ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.
Kannada Bible (KNCL) BSI 2016
ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!