Romans 5:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
Kannada BSI Bible 2016
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.
Kannada Bible (KNCL) BSI 2016
ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.