Romans 9:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಶಾಯನು ಹೇಳಿರುವುದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
Kannada BSI Bible 2016
ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಕರ್ತನು ನಮಗೆ ಸಂತಾನವನ್ನು ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು, ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು ಎಂದು ಹೇಳುತ್ತಾನೆ.
Kannada Bible (KNCL) BSI 2016
ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.