Zechariah 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
Kannada BSI Bible 2016
ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.
Kannada Bible (KNCL) BSI 2016
ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.