Zephaniah 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.
Kannada BSI Bible 2016
ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ; ಯೆಹೋವನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಮಡಿಮಾಡಿದ್ದಾನೆ.
Kannada Bible (KNCL) BSI 2016
“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.