Zephaniah 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.
Kannada BSI Bible 2016
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಹೀಗಿರಲು ನನ್ನನ್ನು ಕಾದುಕೊಂಡಿರ್ರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದುಬಿಡುವದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ; ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವದಷ್ಟೆ.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.