bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
1 Samuel 30
1 Samuel 30
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 31 →
1
ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
2
ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.
3
ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.
4
ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.
5
ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು.
6
ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
7
ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.
8
ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.
9
ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.
10
ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು.
11
ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.
12
ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
13
ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
14
ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.
15
ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು.
16
ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
17
ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.
18
ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.
19
ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು.
20
ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು.
21
ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.
22
ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.
23
ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?
24
ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.
25
ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.
26
ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.
27
ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,
28
ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,
29
ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು,
30
ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು,
31
ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 31 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31