bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Kings 23
2 Kings 23
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 24 →
1
ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.
2
ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.
3
ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.
4
ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.
5
ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ, ಯೆರೂಸಲೇಮಿನ ಸುತ್ತಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸರು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ, ಸೂರ್ಯನಿಗೂ, ಚಂದ್ರನಿಗೂ, ಗ್ರಹಗಳಿಗೂ, ಆಕಾಶದ ಸಮಸ್ತ ಸೈನ್ಯಕ್ಕೂ, ಧೂಪಸುಡುವವರನ್ನೂ ತೆಗೆದುಹಾಕಿದನು.
6
ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.
7
ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.
8
ಯೋಷೀಯನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರಮಾಡಿ, ಗಿಬೆಯ ಪಟ್ಟಣದಿಂದ ಬೇರ್ಷೆಬದವರೆಗೂ, ಯಾಜಕರು ಧೂಪ ಸುಡುತ್ತಿದ್ದ ಉನ್ನತ ಪೂಜಾಸ್ಥಳಗಳನ್ನೂ ಅಶುದ್ಧ ಮಾಡಿದನು. ಅನಂತರ ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ದ್ವಾರದಲ್ಲಿದ್ದ ಬಾಗಿಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.
9
ಆದರೆ ಉನ್ನತ ಪೂಜಾಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಬಲಿಪೀಠದ ಬಳಿಯಲ್ಲಿ ಸೇವೆ ಮಾಡದೇ ಇದ್ದರೂ, ತಮ್ಮ ಸಹೋದರರ ಮಧ್ಯದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.
10
ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.
11
ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠೆಪಡಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಯೋಷೀಯನು ಸುಟ್ಟುಹಾಕಿದನು. ಅವು ಯೆಹೋವ ದೇವರ ಆಲಯದ ದ್ವಾರದಲ್ಲಿ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದವು. ಅರಸರು ಸೂರ್ಯನಿಗೆ ಸಮರ್ಪಿಸಿ ನಿಲ್ಲಿಸಿದ್ದ ರಥಗಳನ್ನು ಸಹ ಸುಟ್ಟುಬಿಟ್ಟನು.
12
ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.
13
ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.
14
ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
15
ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.
16
ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.
17
ಆಗ ಅರಸನು, “ನಾನು ಕಾಣುವ ಈ ಸಮಾಧಿ ಕಲ್ಲು ಯಾರದು?” ಎಂದು ಕೇಳಿದನು. ಅದಕ್ಕೆ ಆ ಊರಿನವರು ಅವನಿಗೆ, “ನೀನು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದದ ದೇವರ ಮನುಷ್ಯನ ಸಮಾಧಿ,” ಎಂದರು.
18
“ಅದನ್ನು ಬಿಟ್ಟುಬಿಡಿರಿ. ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ,” ಎಂದನು. ಹಾಗೆಯೇ ಅವನು ಅವರ ಎಲುಬುಗಳನ್ನು ಸಮಾರ್ಯದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಬಿಟ್ಟುಬಿಟ್ಟರು.
19
ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.
20
ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.
21
ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು.
22
ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲುಗೊಂಡು, ಇಸ್ರಾಯೇಲಿನ ಯೆಹೂದದ ಅರಸರ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ.
23
ಅರಸನಾದ ಯೋಷೀಯನ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಆಚರಿಸಲಾಯಿತು.
24
ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.
25
ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.
26
ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.
27
ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.
28
ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
29
ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.
30
ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.
31
ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.
32
ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
33
ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.
34
ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.
35
ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.
36
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.
37
ಅವನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25