bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Samuel 24
2 Samuel 24
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
1
ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.
2
ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.
3
ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.
4
ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
5
ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.
6
ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.
7
ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.
8
ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
9
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.
10
ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.
11
ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,
12
“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.
13
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
14
ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.
15
ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
16
ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.
17
ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.
18
ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.
19
ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.
20
ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.
21
ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.
22
ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.
23
ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.
24
ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.
25
ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24