bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
2 Samuel 3
2 Samuel 3
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 4 →
1
ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.
2
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು;
3
ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;
4
ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು; ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು;
5
ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. ಇವರು ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು.
6
ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು.
7
ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.
8
ಆಗ ಅಬ್ನೇರನು ಈಷ್ಬೋಶೆತನ ಮಾತುಗಳಿಗೆ ಬಹುಕೋಪಗೊಂಡು, “ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿವಸದವರೆಗೂ ಯೆಹೂದವನ್ನು ವಿರೋಧಿಸಿ, ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಸಹೋದರರಿಗೂ, ಸ್ನೇಹಿತರಿಗೂ ದಯೆ ತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ತಪ್ಪು ಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
9
ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ,
10
ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.
11
ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.
12
ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.
13
ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.
14
ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.
15
ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು.
16
ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು.
17
ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ, “ದಾವೀದನು ನಿಮ್ಮ ಮೇಲೆ ಅರಸನಾಗಿರುವುದಕ್ಕೆ ನೀವು ಹುಡುಕುತ್ತಿದ್ದೀರಿ.
18
ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು.
19
ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು.
20
ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರೆದುಕೊಂಡು, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರನಿಗೂ, ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.
21
ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
22
ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು.
23
ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅಲ್ಲಿದ್ದವರು ಯೋವಾಬನಿಗೆ, “ನೇರನ ಮಗ ಅಬ್ನೇರನು ಅರಸನ ಬಳಿಗೆ ಬಂದನು. ದಾವೀದನು ಅವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ,” ಎಂದರು.
24
ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ?
25
ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು.
26
ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದಾಗ, ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು. ಅವರು ಅವನನ್ನು ಸಿರಾ ಎಂಬ ಬಾವಿಯಿಂದ ತಿರುಗಿ ಕರೆದುಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.
27
ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.
28
ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ.
29
ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.
30
ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
31
ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.
32
ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು.
33
ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ?
34
ನಿನ್ನ ಕೈಗಳು ಕಟ್ಟಿರಲಿಲ್ಲ. ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು.
35
ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು.
36
ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು.
37
ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು.
38
ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?
39
ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24