bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Acts 1
Acts 1
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 2 →
1
ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ.
2
ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.
3
ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.
4
ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.
5
ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.
6
ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.
7
ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.
8
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.
9
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
10
ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,
11
“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.
12
ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.
13
ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.
14
ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.
15
ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:
16
“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.
17
ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”
18
ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.
19
ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.
20
ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ ‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’
21
ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,
22
ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.
23
ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.
24
ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,
25
ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.
26
ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28