bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Amos 9
Amos 9
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
1
ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.
2
ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
3
ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
4
ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”
5
ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.
6
ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು.
7
“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
8
“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
9
ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.
10
ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.
11
ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.
12
ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.
13
ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.
14
ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.
15
ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
All chapters:
1
2
3
4
5
6
7
8
9