bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Deuteronomy 32
Deuteronomy 32
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 31
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 33 →
1
ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
2
ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.
3
ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.
4
ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.
5
ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.
6
ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?
7
ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.
8
ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.
9
ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.
10
ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.
11
ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ,
12
ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು. ಅನ್ಯದೇವರು ಯಾರೂ ಇಸ್ರಾಯೇಲರ ಸಂಗಡ ಇರಲಿಲ್ಲ.
13
ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.
14
ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.
15
ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.
16
ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.
17
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.
18
ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.
19
ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು.
20
ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.
21
ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
22
ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.
23
“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
24
ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು.
25
ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.
26
ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.
27
ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”
28
ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ. ಅವರಲ್ಲಿ ವಿವೇಕವಿಲ್ಲ.
29
ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.
30
ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
31
ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
32
ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.
33
ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, ಹಾವುಗಳ ಕ್ರೂರ ವಿಷವೂ ಆಗಿದೆ.
34
“ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ?
35
ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”
36
ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.
37
ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
38
ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ.
39
“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
40
ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.
41
ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.
42
ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”
43
ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.
44
ಆಗ ಮೋಶೆಯು ನೂನನ ಮಗನಾದ ಹೋಶೇಯನ ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
45
ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ,
46
“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.
47
ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.
48
ಆ ದಿವಸವೇ ಯೆಹೋವ ದೇವರು ಮೋಶೆಗೆ,
49
“ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.
50
ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು.
51
ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.
52
ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.
← Chapter 31
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 33 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34