bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Exodus 22
Exodus 22
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 23 →
1
“ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದು ಕೊಯ್ದರೆ, ಇಲ್ಲವೆ ಅದನ್ನು ಮಾರಿದರೆ, ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ, ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
2
“ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು.
3
ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.
4
ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.
5
“ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ, ದ್ರಾಕ್ಷಿ ತೋಟವನ್ನೂ ಮೇಯಿಸಿದರೆ, ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ, ದ್ರಾಕ್ಷಿ ತೋಟದಲ್ಲಿನ ಉತ್ತಮವಾದದ್ದನ್ನೂ ಈಡು ಕೊಡಬೇಕು.
6
“ಬೆಂಕಿಹತ್ತಿ ಅದು ಮುಳ್ಳಿನ ಕೊಂಪೆಗೆ ತಗುಲಿ, ಸಿವುಡುಗಳ ಬಣವೆಗಳನ್ನಾಗಲಿ, ನಿಂತ ಬೆಳೆಯನ್ನಾಗಲಿ, ಹೊಲವನ್ನಾಗಲಿ ಸುಟ್ಟುಬಿಟ್ಟರೆ, ಆ ಬೆಂಕಿಯನ್ನು ಹಚ್ಚಿದವನು ಖಂಡಿತವಾಗಿ ಈಡು ಕೊಡಬೇಕು.
7
“ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು.
8
ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.
9
ಎತ್ತು, ಕತ್ತೆ, ಕುರಿ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದುಹೋದ ಯಾವ ತರದ ವಸ್ತುಗಳ ವಿಷಯದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು, ‘ಇದು ತನ್ನದೆಂದು,’ ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ನ್ಯಾಯಾಧಿಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸುವರೋ, ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
10
“ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶುವನ್ನಾದರೂ ಕಾಯುವುದಕ್ಕೆ ಕೊಟ್ಟಾಗ, ಅದು ಸತ್ತರೆ, ಇಲ್ಲವೆ ಊನವಾದರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ,
11
ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಯೆಹೋವ ದೇವರ ಮುಂದೆ ಪ್ರಮಾಣಮಾಡಬೇಕು. ಅದನ್ನು ಪಶುವಿನ ಯಜಮಾನನು ಒಪ್ಪಿದರೆ ಅವನು ಈಡುಕೊಡಬಾರದು.
12
ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು.
13
ಕಾಡುಮೃಗವು ಅದನ್ನು ಕೊಂದಿದ್ದರೆ, ಅದರ ಹೆಣವನ್ನು ಸಾಕ್ಷಿಗಾಗಿ ತರಲಿ. ಕಾಡುಮೃಗ ಕೊಂದಿದ್ದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.
14
“ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಲಾಗಿ ತೆಗೆದುಕೊಂಡಿರಲಾಗಿ ಅದರ ಒಡೆಯನು ಅದರ ಹತ್ತಿರ ಇಲ್ಲದಿರುವಾಗ, ಆ ಪಶುವಿಗೆ ಊನವಾದರೆ, ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಈಡು ಕೊಡಬೇಕು.
15
ಆದರೆ ಅದರ ಯಜಮಾನನು ಅದರ ಸಂಗಡ ಇದ್ದರೆ ಈಡು ಕೊಡದೆಯಿರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಎಣಿಕೆಯಾಗಲಿ.
16
“ಒಬ್ಬನು ಕನ್ನಿಕೆಯನ್ನು ಮೋಸಗೊಳಿಸಿ, ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಆಕೆಗೆ ಖಂಡಿತವಾಗಿ ತೆರವನ್ನು ಕೊಡಬೇಕು.
17
ಆಕೆಯ ತಂದೆಗೆ ಆಕೆಯನ್ನು ಕೊಡುವುದಕ್ಕೆ ಮನಸ್ಸಿಲ್ಲದಿದ್ದರೆ, ಅವನಿಗೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
18
“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.
19
“ಪಶುವಿನ ಸಂಗಡ ಸಂಗಮಿಸುವ ಯಾರಾದರೂ ಸರಿ, ಅಂಥವನಿಗೆ ಮರಣದಂಡನೆಯಾಗಬೇಕು.
20
“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.
21
“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.
22
“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.
23
ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.
24
ಆಗ ನನ್ನ ಕೋಪವು ಉರಿಯುವುದು. ಖಡ್ಗದಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
25
“ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.
26
ಇಲ್ಲವೆ ಅವನ ಮೇಲೆ ಬಡ್ಡಿ ಹೊರಿಸಬೇಡ. ನಿಮ್ಮ ನೆರೆಯವನ ಮೇಲಂಗಿಯನ್ನು ಅಡವು ಇಟ್ಟುಕೊಂಡಿದ್ದರೆ, ಸೂರ್ಯನು ಮುಳುಗುವುದರೊಳಗಾಗಿ ಅವನಿಗೆ ಹಿಂದಕ್ಕೆ ಕೊಡಬೇಕು.
27
ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು.
28
“ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
29
“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.
30
ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.
31
“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಹೊಲದಲ್ಲಿ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಹಾಕಬೇಕು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40