bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Ezekiel 14
Ezekiel 14
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 15 →
1
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
2
ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
3
“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?
4
ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.
5
ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’
6
“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.
7
“ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.
8
ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.
9
“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.
10
ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.
11
ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”
12
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
13
“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.
14
ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
15
“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,
16
ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
17
“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,
18
ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
19
“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,
20
ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
21
“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?
22
ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.
23
ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48