bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Isaiah 37
Isaiah 37
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 36
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 53
Chapter 54
Chapter 55
Chapter 56
Chapter 57
Chapter 58
Chapter 59
Chapter 60
Chapter 61
Chapter 62
Chapter 63
Chapter 64
Chapter 65
Chapter 66
Chapter 38 →
1
ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
2
ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
3
ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
4
ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.
5
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
6
ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
7
ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.
8
ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
9
ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,
10
“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
11
ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
12
ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
13
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
14
ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
15
ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ,
16
“ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
17
ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
18
“ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
19
ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
20
ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
21
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,
22
ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
23
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
24
ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
25
ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’
26
“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ
27
ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
28
“ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
29
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.
30
“ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.
31
ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
32
ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
33
“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
34
ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
35
“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”
36
ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
37
ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
38
ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
← Chapter 36
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 53
Chapter 54
Chapter 55
Chapter 56
Chapter 57
Chapter 58
Chapter 59
Chapter 60
Chapter 61
Chapter 62
Chapter 63
Chapter 64
Chapter 65
Chapter 66
Chapter 38 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
61
62
63
64
65
66