bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Jeremiah 14
Jeremiah 14
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 15 →
1
ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:
2
“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.
3
ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
4
ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.
5
ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ.
6
ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”
7
ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.
8
ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
9
ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.
10
ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”
11
ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.
12
ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.
13
ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.
14
ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
15
ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
16
ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.
17
“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.
18
ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”
19
ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.
20
ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.
21
ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.
22
ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52