bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Jeremiah 17
Jeremiah 17
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 18 →
1
“ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.
2
ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.
3
ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
4
ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”
5
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.
6
ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
7
“ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.
8
ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”
9
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?
10
“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”
11
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.
12
ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
13
ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.
14
ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.
15
ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.
16
ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
17
ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ.
18
ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.
19
ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,
20
ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
21
ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.
22
ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.
23
ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.
24
ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,
25
ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.
26
ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.
27
ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52