bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Jeremiah 23
Jeremiah 23
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 24 →
1
“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.
2
ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
3
“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.
4
ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
5
“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
6
ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.
7
“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.
8
ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”
9
ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
10
ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.
11
“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
12
“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
13
“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.
14
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”
15
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”
16
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.
17
ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.
18
ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?
19
ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು
20
ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.
21
ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.
22
ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”
23
ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?”
24
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.
25
“ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
26
ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.
27
ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.
28
ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.
29
“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.
30
ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
31
“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.
32
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.
33
“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’
34
ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.
35
‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,
36
‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.
37
‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.
38
‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.
39
ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.
40
ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52