bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Jeremiah 33
Jeremiah 33
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 34 →
1
ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.
2
“ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,
3
‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’
4
ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.
5
ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
6
“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.
7
ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.
8
ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.
9
ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’
10
“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ
11
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
12
“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.
13
ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.
14
“ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.
15
“ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.
16
ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’
17
ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ
18
ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”
19
ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:
20
“ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?
21
ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.
22
ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”
23
ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:
24
“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?
25
ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,
26
ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 34 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52