bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Jeremiah 49
Jeremiah 49
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 48
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 50 →
1
ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?
2
ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.
3
“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.
4
ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?
5
ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.
6
“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
7
ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?
8
ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.
9
ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?
10
ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.
11
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”
12
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.
13
ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
14
ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”
15
“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.
16
ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
17
“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.
18
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
19
“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”
20
ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
21
ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.
22
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.
23
ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.
24
ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.
25
ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?
26
ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
27
“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”
28
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.
29
ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.
30
“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.
31
“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.
32
ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
33
ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.
34
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:
35
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ
36
ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.
37
ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.
38
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
39
“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
← Chapter 48
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 50 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52