bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
John 13
John 13
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 14 →
1
ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.
2
ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.
3
ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
4
ಯೇಸು ಊಟದಿಂದೆದ್ದು ತಮ್ಮ ಮೇಲು ಹೊದಿಕೆಯನ್ನು ತೆಗೆದಿಟ್ಟು ಅಂಗವಸ್ತ್ರವನ್ನು ತೆಗೆದುಕೊಂಡು ಸೊಂಟಕ್ಕೆ ಕಟ್ಟಿಕೊಂಡರು.
5
ಅನಂತರ ಅವರು ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುವುದಕ್ಕೂ ತಾವು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರೆಸುವುದಕ್ಕೂ ಪ್ರಾರಂಭಿಸಿದರು.
6
ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, “ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?” ಎಂದು ಕೇಳಿದನು.
7
ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು.
8
ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು.
9
ಅದಕ್ಕೆ ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನನ್ನ ಪಾದಗಳನ್ನು ಮಾತ್ರವಲ್ಲದೆ, ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ,” ಎಂದನು.
10
ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.
11
ತನ್ನನ್ನು ಹಿಡಿದುಕೊಡುವವನು ಯಾರೆಂದು ಯೇಸು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.
12
ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತಮ್ಮ ಮೇಲು ಹೊದಿಕೆಯನ್ನು ಧರಿಸಿ, ತಮ್ಮ ಸ್ಥಳದಲ್ಲಿ ಕುಳಿತುಕೊಂಡು ಅವರಿಗೆ, “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೋ?
13
ನೀವು ನನ್ನನ್ನು ‘ಬೋಧಕರೇ’ ಮತ್ತು ‘ಕರ್ತಾ’ ಎಂದು ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
14
ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
15
ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ.
16
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
17
ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
18
“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.
19
“ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.
20
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”
21
ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.
22
ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು.
23
ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.
24
ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು.
25
ಅವನು ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಸ್ವಾಮೀ, ಅವನು ಯಾರು?” ಎಂದು ಯೇಸುವನ್ನು ಕೇಳಿದನು.
26
ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.
27
ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.
28
ಆದರೆ ಯೇಸು ಅವನಿಗೆ ಇದನ್ನು ಏಕೆ ಹೇಳಿದರೆಂದು ಕುಳಿತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.
29
ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.
30
ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
31
ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.
32
ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.
33
“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
34
“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
35
ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು.
36
ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರಿ?” ಎಂದು ಕೇಳಿದ್ದಕ್ಕೆ, ಯೇಸು ಅವನಿಗೆ, “ನಾನು ಹೋಗುವ ಕಡೆಗೆ ಈಗ ನೀನು ನನ್ನನ್ನು ಹಿಂಬಾಲಿಸಲಾರೆ, ನಂತರ ಹಿಂಬಾಲಿಸುವೆ,” ಎಂದರು.
37
ಪೇತ್ರನು ಯೇಸುವಿಗೆ, “ಕರ್ತದೇವರೇ, ನಾನು ಈಗ ನಿಮ್ಮನ್ನು ಏಕೆ ಹಿಂಬಾಲಿಸಲಾರೆನು? ನಿಮಗಾಗಿ ನನ್ನ ಪ್ರಾಣವನ್ನೇ ಕೊಡುವೆನು,” ಎಂದನು.
38
ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 14 →
All chapters:
1
2
3
4
5
6
7
8
9
10
11
12
13
14
15
16
17
18
19
20
21