bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Luke 5
Luke 5
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 6 →
1
ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.
2
ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
3
ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.
4
ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.
5
ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ,” ಎಂದು ಹೇಳಿದನು.
6
ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.
7
ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.
8
ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.
9
ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
10
ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ, ” ಎಂದರು.
11
ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.
12
ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.
13
ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.
14
ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.
15
ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.
16
ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.
17
ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.
18
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.
19
ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.
20
ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.
21
ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.
22
ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?
23
ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?
24
ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
25
ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.
26
ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.
27
ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.
28
ಲೇವಿ ಎಲ್ಲವನ್ನು ಬಿಟ್ಟು ಎದ್ದು ಯೇಸುವನ್ನು ಹಿಂಬಾಲಿಸಿದನು.
29
ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.
30
ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.
31
ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.
32
ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.
33
ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.
34
ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?
35
ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.
36
ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.
37
ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.
38
ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.
39
ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
Recommended Reading
Commentary
Luke Commentaries
→
Devotional
Luke Devotional Guide
→
Get This Bible
Kannada KSB (ಕನ್ನಡ ಸಮಕಾಲಿಕ ಅನುವಾದ) Study Bible
→