bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Proverbs 10
Proverbs 10
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 11 →
1
ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.
2
ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.
3
ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ.
4
ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
5
ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು.
6
ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.
7
ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.
8
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.
9
ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.
10
ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು.
11
ನೀತಿವಂತನ ಬಾಯಿಯು ಜೀವದ ಬುಗ್ಗೆ; ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ.
12
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.
13
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
14
ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.
15
ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ.
16
ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.
17
ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.
18
ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.
19
ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.
20
ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; ದುಷ್ಟರ ಹೃದಯವು ಬೆಲೆಯಿಲ್ಲದ್ದು.
21
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.
22
ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.
23
ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.
24
ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.
25
ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.
26
ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು.
27
ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.
28
ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು.
29
ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.
30
ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ.
31
ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.
32
ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31