bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Proverbs 13
Proverbs 13
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 14 →
1
ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.
2
ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.
3
ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.
4
ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.
5
ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.
6
ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.
7
ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.
8
ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.
9
ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.
10
ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.
11
ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.
12
ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.
13
ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
14
ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.
15
ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.
16
ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.
17
ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.
18
ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.
19
ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.
20
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.
21
ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.
22
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.
23
ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.
24
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.
25
ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 14 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31