bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Proverbs 16
Proverbs 16
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 17 →
1
ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.
2
ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.
3
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
4
ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.
5
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.
6
ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
7
ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.
8
ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
9
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
10
ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.
11
ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.
12
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.
13
ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.
14
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.
15
ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
16
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.
17
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
18
ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.
19
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.
20
ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.
21
ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.
22
ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.
23
ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
24
ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.
25
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.
26
ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು.
27
ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.
28
ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.
29
ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.
30
ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
31
ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.
32
ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
33
ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31