bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Proverbs 28
Proverbs 28
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 29 →
1
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
2
ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.
3
ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
4
ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.
5
ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
6
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.
7
ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
8
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.
9
ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.
10
ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.
11
ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.
12
ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.
13
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
14
ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
15
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.
16
ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.
17
ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.
18
ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.
19
ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.
20
ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.
21
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.
22
ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.
23
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
24
ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
25
ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.
26
ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.
27
ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.
28
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 29 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31