bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
/
Revelation 2
Revelation 2
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 3 →
1
“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:
2
ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
3
ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.
4
ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.
5
ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.
6
ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.
7
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.
8
“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:
9
ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.
10
ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
11
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
12
“ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:
13
ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.
14
ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.
15
ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಹಿಡಿದುಕೊಂಡಿರುವವರೂ ನಿನ್ನಲ್ಲಿದ್ದಾರೆ.
16
ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.
17
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.
18
“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:
19
ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ.
20
ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.
21
ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.
22
ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
23
ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
24
ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.
25
ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲವೆಂಬುದೇ.
26
ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.
27
ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’
28
ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು.
29
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22