bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI Bible 2016
/
1 Samuel 10
1 Samuel 10
Kannada BSI Bible 2016
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 11 →
1
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
2
ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
3
ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
4
ಅವರು ನಿನ್ನ ಕ್ಷೇಮ ಸಮಾಚಾರವನ್ನು ವಿಚಾರಿಸಿ ನಿನಗೆ ಎರಡು ರೊಟ್ಟಿಗಳನ್ನು ಕೊಡುವರು; ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವಿ.
5
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
6
ಆಗ ಕರ್ತನ ಆತ್ಮನು ನಿನ್ನ ಮೇಲೆ ಬರುವನು; ನೀನು ಅವರ ಸಂಗಡ ಪ್ರವಾದಿಸುವಿ; ಬೇರೆ ಮನುಷ್ಯನಾಗಿ ಮಾರ್ಪಡುವಿ.
7
ಈ ಗುರುತು ಗಳೆಲ್ಲಾ ನಿನಗೆ ಸಂಭವಿಸಿದಾಗ ದೇವರು ನಿನ್ನ ಸಂಗಡ ಇರುವದರಿಂದ ನೀನು ಆ ವೇಳೆಯಲ್ಲಿ ನಿನಗೆ ಅನು ಕೂಲವಾದದ್ದನ್ನು ಮಾಡು.
8
ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
9
ಅವನು ಸಮುವೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ ಏನಾಯಿತಂದರೆ, ದೇವರು ಅವನಿಗೆ ಬೇರೆ ಹೃದಯವನ್ನು ಕೊಟ್ಟನು; ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.
10
ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
11
ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
12
ಅದಕ್ಕೆ ಅಲ್ಲಿಯವನೊಬ್ಬನು ಪ್ರತ್ಯುತ್ತರವಾಗಿ--ಇವರ ತಂದೆ ಯಾರು ಅಂದನು. ಆದದರಿಂದ ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ ಎಂಬ ಸಾಮತಿ ಉಂಟಾ ಯಿತು.
13
ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.
14
ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
15
ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.
16
ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.
17
ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
18
ನಾನು ನಿಮ್ಮನ್ನು ಐಗುಪ್ತ್ಯದಿಂದ ಬರಮಾಡಿ ಐಗುಪ್ತರ ಕೈಯಿಂದಲೂ ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.
19
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
20
ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು.
21
ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
22
ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
23
ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
24
ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
25
ಸಮುವೇಲನು ರಾಜ್ಯದ ಪದ್ಧತಿ ಯನ್ನು ಜನರಿಗೆ ಹೇಳಿಕೊಟ್ಟು ಒಂದು ಪುಸ್ತಕದಲ್ಲಿ ಬರೆದು ಕರ್ತನ ಮುಂದೆ ಇಟ್ಟನು. ಆಗ ಸಮುವೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.
26
ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
27
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31