bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI Bible 2016
/
Luke 23
Luke 23
Kannada BSI Bible 2016
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 24 →
1
ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
2
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
3
ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
4
ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
5
ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
6
ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
7
ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
8
ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
9
ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
10
ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
11
ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
12
ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
13
ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
14
ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
15
ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
16
ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
17
ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
18
ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
19
(ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
20
ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
21
ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
22
ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
23
ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
24
ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
25
ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
26
ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
27
ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
28
ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
29
ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
30
ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
31
ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
32
ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
33
ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
34
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
35
ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
36
ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
37
ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
38
ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
39
ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
40
ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
41
ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
42
ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
43
ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
44
ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
45
ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
46
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
47
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
48
ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
49
ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
50
ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
51
ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
52
ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
53
ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
54
ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
55
ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
56
ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24