bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Chronicles 21
1 Chronicles 21
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 22 →
1
ಸೈತಾನನು ಇಸ್ರಾಯೇಲ್ಯರಿಗೆ ವಿರೋಧವಾಗಿ ಎದ್ದು ಖಾನೇಷುಮಾರಿಮಾಡುವದಕ್ಕೆ ದಾವೀದನನ್ನು ಪ್ರೇರಿಸಿದನು.
2
ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು - ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಾಯೇಲ್ಯರನ್ನು ಲೆಕ್ಕಮಾಡಿಕೊಂಡು ಬನ್ನಿರಿ ಎಂದು ಆಜ್ಞಾಪಿಸಿದನು.
3
ಆಗ ಯೋವಾಬನು - ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದನ್ನು ಅಪೇಕ್ಷಿಸುವದೇನು? ಇಸ್ರಾಯೇಲ್ಯರನ್ನು ಅಪರಾಧಕ್ಕೆ ಗುರಿಮಾಡುವದೇಕೆ ಅಂದನು.
4
ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಲ್ಲಿ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿದನು.
5
ಯೋವಾಬನು ದಾವೀದನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.
6
ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದದರಿಂದ ಅವನು ಇವರೊಡನೆ ಲೇವಿ ಬೆನ್ಯಾಮೀನ್ ಕುಲಗಳವರ ಖಾನೇಷುಮಾರಿಯನ್ನು ಮಾಡಲಿಲ್ಲ.
7
ಖಾನೇಷುಮಾರಿಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿದನು.
8
ಆಗ ದಾವೀದನು - ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾಗಿದ್ದೇನೆ; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ದೇವರನ್ನು ಪ್ರಾರ್ಥಿಸಲು
9
ಆತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ -
10
ನೀನು ದಾವೀದನ ಹತ್ತಿರ ಹೋಗಿ ಅವನಿಗೆ - ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳು ಅಂದನು.
11
ಆಗ ಗಾದನು ದಾವೀದನ ಬಳಿಗೆ ಹೋಗಿ ಅವನಿಗೆ - ಯೆಹೋವನು ಹೇಳುವದೇನಂದರೆ -
12
ಮೂರುವರುಷಗಳ ಕಾಲ ಬರವು ಉಂಟಾಗಬೇಕೋ, ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಕತ್ತಿಗೆ ಬಲಿಯಾಗುವದು ಬೇಕೋ, ಇಲ್ಲವೆ ಇಸ್ರಾಯೇಲ್ಯರ ಸಮಸ್ತಪ್ರಾಂತಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರಕದೂತನಿಂದುಂಟಾಗುವ ಮೂರು ದಿನಗಳ ಘೋರ ವ್ಯಾಧಿ ರೂಪವಾದ ಯೆಹೋವನ ಕತ್ತಿಯುಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ ಎಂಬದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಎಂದು ಹೇಳಿದನು.
13
ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.
14
ಆಗ ಯೆಹೋವನು ಇಸ್ರಾಯೇಲ್ಯರ ಮೇಲೆ ವ್ಯಾಧಿಯನ್ನು ಬರಮಾಡಿದನು; ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
15
ದೇವರು ಯೆರೂಸಲೇಮನ್ನೂ ಸಂಹರಿಸುವದಕ್ಕೆ ದೂತನನ್ನು ಕಳುಹಿಸಿದನು; ಆದರೆ ಆ ದೂತನು ಸಂಹರಿಸುವದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಟ್ಟು ಸಂಹಾರಕದೂತನಿಗೆ - ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
16
ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವದನ್ನೂ ಚಾಚಿದ ಕೈಯಲ್ಲಿ ಯೆರೂಸಲೇವಿುಗೆ ವಿರೋಧವಾಗಿ ಹಿರಿದ ಕತ್ತಿಯಿರುವದನ್ನೂ ಕಂಡಾಗ ಅವನೂ ಹಿರಿಯರೂ ಗೋಣೀತಟ್ಟನ್ನು ಹೊದ್ದುಕೊಂಡವರಾಗಿ ಬೋರ್ಲಬಿದ್ದರು;
17
ಮತ್ತು ದಾವೀದನು ದೇವರಿಗೆ - ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೋ! ಮಹಾಪಾಪಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಯೆಹೋವನೇ, ನನ್ನ ದೇವರೇ, ನಿನ್ನ ಹಸ್ತವು ನಿನ್ನ ಜನರನ್ನು ಬಾಧಿಸುವದಕ್ಕೆ ಅವರಿಗೆ ವಿರೋಧವಾಗಿರದೆ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.
18
ಆಗ ಯೆಹೋವನ ದೂತನು ಗಾದನಿಗೆ - ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸುವದಕ್ಕೆ ಹೋಗಬೇಕು ಎಂದು ದಾವೀದನಿಗೆ ಹೇಳು ಎಂಬದಾಗಿ ಆಜ್ಞಾಪಿಸಿದನು.
19
ದಾವೀದನು ಗಾದನ ಮುಖಾಂತರವಾಗಿ ತನಗಾದ ಯೆಹೋವನ ಅಪ್ಪಣೆಯಂತೆ ಹೊರಟನು.
20
ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ತಿರುಗಿಕೊಂಡು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.
21
ದಾವೀದನು ತನ್ನ ಬಳಿಗೆ ಬರುವದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟುಹೋಗಿ ಅವನಿಗೆ ಅಡ್ಡಬಿದ್ದನು.
22
ದಾವೀದನು ಅವನಿಗೆ - ನಿನ್ನ ಕಣವನ್ನೂ ಭೂವಿುಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟಿಸುತ್ತೇನೆ; ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು ಎಂದು ಹೇಳಿದನು.
23
ಆಗ ಒರ್ನಾನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ; ಇವೆಲ್ಲವನ್ನೂ ಕೊಡುತ್ತೇನೆ ಎಂದು ಹೇಳಿದನು.
24
ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ
25
ಆ ಭೂವಿುಗೋಸ್ಕರ ಅವನಿಗೆ ಆರುನೂರು ತೊಲೆ ಬಂಗಾರವನ್ನು ಕೊಟ್ಟು
26
ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿ ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ
27
ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದನು. ಅವನು ಹಾಗೆಯೇ ಮಾಡಿದನು.
28
ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರವೂ ಯಜ್ಞವೇದಿಯೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು.
29
ಆದರೂ ದಾವೀದನು ಯೆಹೋವದೂತನ ಕತ್ತಿಗೆ ಹೆದರಿ ದೇವದರ್ಶನಕ್ಕೋಸ್ಕರ ಅಲ್ಲಿಗೆ ಹೋಗಲಾರದೆ ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಯಜ್ಞವನ್ನರ್ಪಿಸಿದನು.
30
ಆ ಕಾಲದಲ್ಲಿ ದಾವೀದನಿಗೆ ಯೆಹೋವನಿಂದ ಸದುತ್ತರದೊರಕಿದ್ದರಿಂದ ಅವನು -
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29