bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
1 Corinthians 1
1 Corinthians 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 2 →
1
ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟ ಪೌಲನೂ ಸಹೋದರನಾದ
2
ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ
3
ಅವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4
ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿವಿುತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
5
ಯಾಕಂದರೆ ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡ ಕಾರಣ ನೀವು ಎಲ್ಲಾ ನುಡಿಯಲ್ಲಿಯೂ ಎಲ್ಲಾ ತಿಳುವಳಿಕೆಯಲ್ಲಿಯೂ ಆತನಲ್ಲಿ ಸಮೃದ್ಧಿ ಹೊಂದಿದವರಾಗಿದ್ದೀರಿ.
7
ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.
8
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
9
ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.
10
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
11
ಯಾಕಂದರೆ ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದು ಬಂತು.
12
ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
13
ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೋ?
14
ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನಮಾಡಿಸಲಿಲ್ಲವಾದದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೆಂದು ಯಾರೂ ಹೇಳಲಾಗದು. ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡುತ್ತೇನೆ.
16
ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ಕಾಣೆನು.
17
ದೀಕ್ಷಾಸ್ನಾನ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೇ ಕ್ರಿಸ್ತನು ನನ್ನನ್ನು ಕಳುಹಿಸಿದನು. ಆದರೆ ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
18
ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.
19
ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.
20
ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.
21
ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.
22
ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
23
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;
24
ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.
25
ಲೋಕದವರು ದೇವರಲ್ಲಿ ಯಾವದನ್ನು ಬುದ್ಧಿಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠ ಜ್ಞಾನವಾಗಿದೆ. ಅವರು ದೇವರಲ್ಲಿ ಯಾವದನ್ನು ಬಲಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.
26
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
27
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
28
ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
30
ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.
31
ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 2 →
All chapters:
1
2
3
4
5
6
7
8
9
10
11
12
13
14
15
16