bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Chronicles 24
2 Chronicles 24
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 25 →
1
ಯೆಹೋವಾಷನು ಅರಸನಾದಾಗ ಏಳು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ನಾಲ್ವತ್ತು ವರುಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.
2
ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.
3
ಯೆಹೋಯಾದನು ಅವನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಕೊಟ್ಟನು; ಅವನು ಗಂಡು ಹೆಣ್ಣು ಮಕ್ಕಳನ್ನು ಪಡೆದನು.
4
ಕಾಲಾಂತರದಲ್ಲಿ ಯೆಹೋವಾಷನು ಯೆಹೋವನ ಆಲಯವನ್ನು ಜೀರ್ಣೋದ್ಧಾರಮಾಡುವದಕ್ಕೆ ಮನಸ್ಸುಮಾಡಿ
5
ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ - ನೀವು ಯೆಹೂದದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಯೆಹೋವನ ಆಲಯವನ್ನು ವರುಷ ವರುಷ ಜೀರ್ಣೋದ್ಧಾರ ಮಾಡುವದಕ್ಕಾಗಿ ಎಲ್ಲಾ ಇಸ್ರಾಯೇಲ್ಯರಿಂದ ಹಣಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ ಎಂದು ಆಜ್ಞಾಪಿಸಿದನು.
6
ಆದರೂ ಲೇವಿಯರು ಅವಸರ ಪಡಲಿಲ್ಲ. ಆದದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರಿಸಿ ಅವನಿಗೆ - ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲಾ ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇವಿುನವರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?
7
ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು.
8
ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಲಿನ ಹೊರಗೆ ಇಡಿಸಿ -
9
ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬದಾಗಿ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಪ್ರಕಟಿಸಿದನು.
10
ಎಲ್ಲಾ ಪ್ರಭುಗಳೂ ಜನರೂ ಸಂತೋಷದಿಂದ ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು.
11
ಪೆಟ್ಟಿಗೆಯಲ್ಲಿ ತುಂಬಾ ಹಣವಿರುತ್ತದೆಂದು ಕಂಡುಬಂದಾಗೆಲ್ಲಾ ಲೇವಿಯರು ಪೆಟ್ಟಿಗೆಯನ್ನು ರಾಜಕೀಯ ಅಧ್ಯಕ್ಷರ ಬಳಿಗೆ ತರುವರು. ಆಗ ಅರಸನ ಲೇಖಕನೂ ಮಹಾಯಾಜಕನ ಉದ್ಯೋಗಸ್ಥನೂ ಬಂದು ಅದನ್ನು ತೆರವುಮಾಡಿ ತಿರಿಗಿ ಅದರ ಸ್ಥಳದಲ್ಲಿಡುವರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದದರಿಂದ ಬಹಳ ಹಣವನ್ನು ಕೂಡಿಸಿದರು.
12
ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡಿಸುವವರಿಗೆ ಒಪ್ಪಿಸಿದರು. ಇವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.
13
ಕೆಲಸಮಾಡುವವರು ಬಹುಪ್ರಯಾಸ ಪಡುತ್ತಿದ್ದದರಿಂದ ಜೀರ್ಣೋದ್ಧಾರದ ಕೆಲಸವು ಮುಂದರಿಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.
14
ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.
15
ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರುಷದವನಾಗಿದ್ದನು.
16
ಅವನು ಇಸ್ರಾಯೇಲ್ಯರ ವಿಷಯದಲ್ಲಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು.
17
ಯೆಹೋಯಾದನು ಮೃತನಾದ ಮೇಲೆ ಯೆಹೂದಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು;
18
ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.
19
ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.
20
ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.
21
ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
22
ಇವನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗುಂಟಾದ ಕೃಪೆಯನ್ನು ನೆನಪುಮಾಡಿಕೊಳ್ಳದೆ ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ - ಯೆಹೋವನೇ ನೋಡಿ ವಿಚಾರಿಸಲಿ ಅಂದನು.
23
ವರುಷಾಂತ್ಯದಲ್ಲಿ ಅರಾಮ್ಯರ ಸೈನ್ಯವು ಯೆಹೋವಾಷನಿಗೆ ವಿರೋಧವಾಗಿ ಹೊರಟಿತು. ಆ ಸೈನ್ಯದವರು ಯೆಹೂದದೇಶದೊಳಗೆ ನುಗ್ಗಿ ಯೆರೂಸಲೇವಿುಗೆ ಬಂದು ಇಸ್ರಾಯೇಲ್ಯರ ಎಲ್ಲಾ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.
24
ಅರಾಮ್ಯರ ಸೈನ್ಯದಿಂದ ಬಂದು ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟುಬಿಟ್ಟದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಆತನು ಅರಾಮ್ಯರ ಕೈಯಲ್ಲಿ ಬೀಳುವಂತೆ ಮಾಡಿ ಯೆಹೋವಾಷನನ್ನು ಇವರ ಮುಖಾಂತರ ಶಿಕ್ಷಿಸಿದನು.
25
ಇವರು ಅವನನ್ನು ಬಿಟ್ಟುಹೋದಕೂಡಲೆ ಅವನ ಸೇವಕರು ಯಾಜಕನಾದ ಯೆಹೋಯಾದನ ಮಗನ ವಧೆಯ ನಿವಿುತ್ತ ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಕಠಿನ ರೋಗದಲ್ಲಿದ್ದ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.
26
ಅಮ್ಮೋನ್ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರೀತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬವರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿದವರು.
27
ಅವನ ಮಕ್ಕಳ ವಿವರವೂ ಅವನಿಗೆ ವಿರುದ್ಧವಾಗಿ ಹೇಳಲ್ಪಟ್ಟ ಅನೇಕ ದೈವೋಕ್ತಿಗಳೂ ದೇವಾಲಯದ ಜೀರ್ಣೋದ್ಧಾರವೃತ್ತಾಂತವೂ ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 25 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36