bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 2
2 Kings 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 3 →
1
ಯೆಹೋವನು ಎಲೀಯನನ್ನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಸೇರಿಸುವ ಸಮಯ ಬಂದಾಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.
2
ಆಗ ಎಲೀಯನು ಎಲೀಷನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಅನ್ನಲು ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟನು.
3
ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಎದುರುಗೊಂಡು ಅವನನ್ನು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವನೆಂಬದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು -
4
ಗೊತ್ತುಂಟು, ಸುಮ್ಮನಿರ್ರಿ ಅಂದನು. ಎಲೀಯನು ಎಲೀಷನಿಗೆ - ದಯವಿಟ್ಟು ಇಲ್ಲೇ ಇರು; ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆದರೆ ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.
5
ಅಲ್ಲಿನ ಪ್ರವಾದಿಮಂಡಲಿಯವರು ಅವನನ್ನು ಎದುರುಗೊಂಡು - ಯೆಹೋವನು ಈಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ಮೇಲಕ್ಕೆ ಕರೆದುಕೊಳ್ಳುವನೆಂದು ನಿನಗೆ ಗೊತ್ತುಂಟೋ ಎಂದು ಕೇಳಿದರು. ಅದಕ್ಕೆ ಅವನು - ಗೊತ್ತುಂಟು, ಸುಮ್ಮನಿರ್ರಿ ಎಂದು ಉತ್ತರಕೊಟ್ಟನು.
6
ಎಲೀಯನು ತಿರಿಗಿ ಅವನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆಗ ಅವನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಉತ್ತರಕೊಟ್ಟನು; ಆದದರಿಂದ ಇಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.
7
ಪ್ರವಾದಿ ಮಂಡಲಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.
8
ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.
9
ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು.
10
ಆಗ ಎಲೀಯನು ಅವನಿಗೆ - ನೀನು ದುರ್ಲಭವಾದದ್ದನ್ನು ಕೇಳಿಕೊಂಡಿ; ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ಅದು ದೊರಕುವದು; ಇಲ್ಲವಾದರೆ ದೊರಕುವದಿಲ್ಲ ಅಂದನು.
11
ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.
12
ಎಲೀಷನು ಅದನ್ನು ನೋಡುತ್ತಾ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಗಳಾಗಿದ್ದವನೇ ಎಂದು ಕೂಗಿ ಎಲೀಯನು ತನಗೆ ಕಾಣಿಸದೆ ಹೋದ ಮೇಲೆ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.
13
ಅನಂತರ ಅವನು ಮೇಲಣಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದೀ ತೀರಕ್ಕೆ ಬಂದು
14
ಎಲೀಯನ ದೇವರಾದ ಯೆಹೋವನೆಲ್ಲಿ ಅಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು; ಅವನು ದಾಟಿಹೋದನು.
15
ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.
16
ಅನಂತರ ಅವರು ಅವನಿಗೆ - ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ; ನಿನ್ನ ಯಜಮಾನನನ್ನು ಹುಡುಕಹೋಗುವದಕ್ಕೆ ಅವರಿಗೆ ಅಪ್ಪಣೆಯಾಗಲಿ. ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು ಎಂದು ಹೇಳಿದರು; ಅವನು ಅವರಿಗೆ - ನೀವು ಕಳುಹಿಸಬೇಡಿರಿ ಅಂದನು.
17
ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣದೆ
18
ಇನ್ನೂ ಯೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಬಂದರು; ಅವನು ಅವರಿಗೆ - ಹೋಗಬೇಡಿರೆಂದು ನಾನು ಹೇಳಲಿಲ್ಲವೋ ಅಂದನು.
19
ಯೆರಿಕೋವಿನ ಜನರು ಎಲೀಷನಿಗೆ - ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೇದಾಗಿದೆ; ಆದರೆ ನೀರು ಕೆಟ್ಟದ್ದಾಗಿರುವದರಿಂದ ಬಂಜೆತನ ಹೆಚ್ಚು ಎಂದು ಹೇಳಿದರು.
20
ಆಗ ಎಲೀಷನು ಅವರಿಗೆ - ಒಂದು ಹೊಸ ಮಡಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದುಕೊಡಿರಿ ಅಂದನು.
21
ಅವರು ತಂದುಕೊಡಲು ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ - ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
22
ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು; ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ.
23
ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.
24
ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.
25
ಎಲೀಷನು ಅಲ್ಲಿಂದ ಕರ್ಮೆಲ್ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಬಂದನು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25