bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
2 Kings 25
2 Kings 25
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
1
ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿ
2
ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದವರೆಗೆ ಅದಕ್ಕೆ ಮುತ್ತಿಗೆ ಹಾಕಿದನು.
3
ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ
4
ಒಂಭತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಬಳಿಯಲ್ಲಿರುವ ಬಾಗಲಿನಿಂದ ಓಡಿಹೋದರು; ಅದು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋಗುತ್ತಿರುವಾಗ
5
ಕಸ್ದೀಯರ ಸೈನ್ಯದವರು ಅವನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.
6
ಅನಂತರ ಕಸ್ದೀಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
7
ಅವನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಅವನಿಗೆ ಬೇಡಿ ಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬೆಲಿಗೆ ತೆಗೆದುಕೊಂಡು ಹೋದರು.
8
ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು
9
ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
10
ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತುಗೋಡೆಗಳನ್ನು ಕೆಡವಿದರು.
11
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
12
ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
13
ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ ಪೀಠಗಳನ್ನೂ ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು
14
ಅವುಗಳ ತಾಮ್ರವನ್ನೂ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ ಸಲಿಕೆ ಕತ್ತರಿ ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.
15
ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
16
ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
17
ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬಹಣ್ಣುಗಳೂ ಇದ್ದವು.
18
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು,
19
ಮೂರು ಮಂದಿ ದ್ವಾರಪಾಲಕರು, ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ರೈತರು ಇದ್ದರು.
20
ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು
21
ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
22
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ಅಧಿಪತಿಯನ್ನಾಗಿ ನೇವಿುಸಿದನು.
23
[ತಪ್ಪಿಸಿಕೊಂಡು ಉಳಿದಿದ್ದ] ಯೆಹೂದ ಸೇನಾಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇವಿುಸಲ್ಪಟ್ಟನೆಂಬ ವರ್ತಮಾನವನ್ನು ಕೇಳಿ ತಮ್ಮ ಜನರೊಡನೆ ವಿುಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು. ಅವರು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
24
ಗೆದಲ್ಯನು ಇವರಿಗೂ ಇವರ ಜನರಿಗೂ - ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಒಳಗಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು ಎಂದು ಆಣೆಯಿಟ್ಟು ಹೇಳಿದನು.
25
ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ ಅವನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಸಂಹರಿಸಿದನು.
26
ಆಗ ಎಲ್ಲಾ ಚಿಕ್ಕವರೂ ದೊಡ್ಡವರೂ ಸೇನಾಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
27
ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
28
ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
29
ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟ ಮಾಡಿದನು.
30
ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿ ನಿತ್ಯವೂ ಅರಸನಿಂದಲೇ ದೊರಕುತ್ತಿದ್ದವು.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25