bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 22
Acts 22
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 23 →
1
ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.
2
ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತಾಡುವದನ್ನು ಕೇಳಿ ಅವರು ಮತ್ತೂ ನಿಶ್ಶಬ್ದವಾದರು. ಆಗ ಅವನು ಹೇಳಿದ್ದೇನಂದರೆ -
3
ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.
4
ಕ್ರಿಸ್ತ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ ಹೆಂಗಸರಿಗೂ ಬೇಡೀಹಾಕಿಸುತ್ತಾ ಅವರನ್ನು ಸೆರೆಮನೆಗಳಿಗೆ ಕೊಡಿಸುತ್ತಾ ಇದ್ದೆನು, ಅವರ ಕೊಲೆಗಾದರೂ ಹಿಂತೆಗೆಯಲಿಲ್ಲ.
5
ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.
6
ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.
7
ಆಗ - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.
8
ಅದಕ್ಕೆ ನಾನು - ಕರ್ತನೇ, ನೀನಾರು? ಎಂದು ಕೇಳಲು ಆತನು - ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
9
ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು ನನ್ನ ಸಂಗಡ ಮಾತಾಡಿದವನ ಶಬ್ದವನ್ನು ಕೇಳಲಿಲ್ಲ.
10
ಆಗ ನಾನು - ಕರ್ತನೇ, ನಾನೇನು ಮಾಡಬೇಕು? ಎಂದು ಕೇಳಲು ಕರ್ತನು ನನಗೆ - ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವದಕ್ಕೆ ನಿನಗೆ ನೇವಿುಸಿರುವದೆಲ್ಲಾ ಅಲ್ಲಿ ತಿಳಿಸಲ್ಪಡುವದು ಎಂದು ಹೇಳಿದನು.
11
ಆ ಬೆಳಕಿನ ಪ್ರಭಾವದಿಂದ ನನಗೆ ಕಣ್ಣುಕಾಣದೆ ಇದ್ದದರಿಂದ ನನ್ನ ಜೊತೆಯಲ್ಲಿದ್ದವರು ನನ್ನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
12
ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ
13
ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು ನಿಂತು - ಸಹೋದರನಾದ ಸೌಲನೇ, ನಿನಗೆ ಕಣ್ಣುಕಾಣಿಸಲಿ ಎಂದು ಹೇಳಿದನು. ಹೇಳಿದಾಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
14
ಆಮೇಲೆ ಅವನು - ನಮ್ಮ ಪಿತೃಗಳ ದೇವರು ತನ್ನ ಚಿತ್ತವನ್ನು ನೀನು ತಿಳುಕೊಳ್ಳುವದಕ್ಕೂ ಆ ನೀತಿವಂತನನ್ನು ನೋಡುವದಕ್ಕೂ ಆತನ ಬಾಯಿಂದ ಒಂದು ಮಾತನ್ನು ಕೇಳುವದಕ್ಕೂ ನಿನ್ನನ್ನು ನೇವಿುಸಿದ್ದಾನೆ.
15
ನೀನು ಕಂಡು ಕೇಳಿದ್ದರ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.
16
ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.
17
ಅನಂತರದಲ್ಲಿ ನಾನು ಯೆರೂಸಲೇವಿುಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿ ಯೇಸುವನ್ನು ಕಂಡೆನು.
18
ಆತನು - ನೀನು ತ್ವರೆಪಟ್ಟು ಬೇಗನೆ ಯೆರೂಸಲೇವಿುನಿಂದ ಹೊರಟುಹೋಗು, ನನ್ನ ವಿಷಯದಲ್ಲಿ ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವದಿಲ್ಲ ಅಂದನು.
19
ಅದಕ್ಕೆ ನಾನು - ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ;
20
ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ ನಾನೂ ಹತ್ತರ ನಿಂತು ಒಪ್ಪಿಕೊಂಡು ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ ಅಂದೆನು.
21
ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.
22
ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.
23
ಅವರು ಕೂಗುತ್ತಾ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ದೂಳನ್ನು ತೂರುತ್ತಾ ಇರಲಾಗಿ
24
ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬದನ್ನು ಸಹಸ್ರಾಧಿಪತಿಯು ತಿಳುಕೊಳ್ಳುವದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
25
ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು.
26
ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ - ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು ಎಂದು ಹೇಳಲು
27
ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು - ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು ಎಂದು ಅವನನ್ನು ಕೇಳಿದನು.
28
ಅವನು, ಹೌದು ಅಂದನು. ಅದಕ್ಕೆ ಸಹಸ್ರಾಧಿಪತಿಯು - ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು ಅನ್ನಲು ಪೌಲನು - ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು ಅಂದನು.
29
ಅವನನ್ನು ಹೊಡೆದು ವಿಚಾರಿಸುವದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
30
ಪೌಲನ ಮೇಲೆ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಕೂಡಿಬರುವದಕ್ಕೆ ಅಪ್ಪಣೆಕೊಟ್ಟು ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28