bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Acts 8
Acts 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 9 →
1
ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
2
ಭಕ್ತರಾದ ಜನರು ಸ್ತೆಫನನನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
3
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.
4
ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತಾವಾಕ್ಯವನ್ನು ಸಾರುತ್ತಿದ್ದರು.
5
ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನನ್ನು ಅಲ್ಲಿರುವವರಿಗೆ ಪ್ರಕಟಿಸಿದನು.
6
ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಏಕಮನಸ್ಸಾಗಿ ಲಕ್ಷ್ಯಕೊಟ್ಟರು.
7
ಯಾಕಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥಮಾಡಲ್ಪಟ್ಟರು.
8
ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
9
ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
10
ಚಿಕ್ಕವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರೂ - ಇವನು ಮಹಾ ಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
11
ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರಗನ್ನು ಹುಟ್ಟಿಸಿದ್ದ ಕಾರಣದಿಂದ ಅವರು ಅವನಿಗೆ ಲಕ್ಷ್ಯಕೊಡುತ್ತಿದ್ದರು.
12
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
13
ಆಗ ಸೀಮೋನನು ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.
14
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇವಿುನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
15
ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
16
ಯಾಕಂದರೆ ಆ ವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು.
17
ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
18
ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮದಾನವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು ಅವರ ಮುಂದಿಟ್ಟು -
19
ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮ ವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ ಅಂದನು.
20
ಆದರೆ ಪೇತ್ರನು ಅವನಿಗೆ - ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
21
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಿಲ್ಲ.
22
ಆದದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷವಿುಸುವನೋ ಏನೋ ಆತನನ್ನು ಬೇಡಿಕೋ.
23
ಯಾಕಂದರೆ ನೀನು ಹಾನಿಕರವಾದ ವಿಷವೂ ದುಷ್ಟತ್ವದಲ್ಲಿ ಬಿಗಿಯುವ ಬಂಧನವೂ ಆಗಿರುವವನೆಂದು ಕಾಣುತ್ತದೆ ಅಂದನು.
24
ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.
25
ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇವಿುಗೆ ಹಿಂತಿರಿಗಿ ಹೊರಟು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
26
ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ - ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇವಿುನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
27
ಅವನು ಎದ್ದು ಹೊರಟುಹೋದನು; ಹೋಗುತ್ತಿರುವಾಗ ಐಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
28
ಅವನು ದೇವಾರಾಧನೆಗೋಸ್ಕರ ಯೆರೂಸಲೇವಿುಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತುಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿದ್ದನು.
29
ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.
30
ಫಿಲಿಪ್ಪನು ಓಡಿ ಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ - ಎಲೈ, ನೀನು ಓದುವದು ನಿನಗೆ ತಿಳಿಯುತ್ತದೋ? ಅನ್ನಲು
31
ಅವನು - ಯಾರಾದರೂ ನನಗೆ ಅರ್ಥ ತಿಳಿಸಿಕೊಟ್ಟ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ - ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕೂತುಕೋ ಎಂಬದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
32
ಅವನು ಓದುತ್ತಿದ್ದ ಶಾಸ್ತ್ರವಚನವು ಯಾವದಂದರೆ - ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯಲೇ ಇಲ್ಲ.
33
ಆತನಿಗುಂಟಾದ ದೀನಾವಸ್ಥೆಯಲ್ಲಿ ನ್ಯಾಯವು ಇಲ್ಲದೆಹೋಯಿತು. ಆತನ ಸಕಾಲದವರನ್ನು ಹೇಳತಕ್ಕದ್ದೇನು? ಆತನ ಜೀವವನ್ನು ಭೂವಿುಯ ಮೇಲಿನಿಂದ ತೆಗೆದುಬಿಟ್ಟರಲ್ಲಾ ಎಂಬದೇ.
34
ಕಂಚುಕಿಯು ಈ ವಚನವನ್ನು ಕುರಿತು - ಪ್ರವಾದಿಯು ಇದನ್ನು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
35
ಫಿಲಿಪ್ಪನು ಉಪದೇಶಿಸುವದಕ್ಕೆ ತೊಡಗಿ ಅದೇ ವಚನವನ್ನು ಆಧಾರ ಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
36
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು;
38
ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
39
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.
40
ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 9 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28