bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Isaiah 37
Isaiah 37
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 36
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 53
Chapter 54
Chapter 55
Chapter 56
Chapter 57
Chapter 58
Chapter 59
Chapter 60
Chapter 61
Chapter 62
Chapter 63
Chapter 64
Chapter 65
Chapter 66
Chapter 38 →
1
ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.
2
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ ಎಂದು ಆಜ್ಞಾಪಿಸಿದನು.
3
ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.
4
ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
5
ಯೆಶಾಯನು ಅರಸನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ - ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ; ಅವುಗಳಿಗೆ ನೀನು ಹೆದರಬೇಡ.
7
ಇಗೋ, ನಾನು ಅವನ ಮೇಲೆ [ಭಯದ] ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬೀ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ ಎಂಬದಾಗಿ ಉತ್ತರಕೊಟ್ಟನು.
8
ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.
9
ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಅಶ್ಶೂರದ ಅರಸನು ಕೇಳಿ -
10
[ಹಿಜ್ಕೀಯನೇ,] ನೀನು ನಂಬುವ ದೇವರು - ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
11
ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಉಳಿಯುವಿಯೋ?
12
ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್, ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?
13
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
14
ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು
15
ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ, ಭೂಲೋಕಗಳನ್ನುಂಟು ಮಾಡಿದವನು ನೀನೇ.
17
ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.
18
ಯೆಹೋವನೇ, ಅಶ್ಶೂರದ ಅರಸರು ಸಕಲಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳುಮಾಡಿ
19
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.
20
ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.
21
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ - ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು; ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಯೆಹೋವನು ಕೇಳಿ ಅವನನ್ನು ಕುರಿತು -
22
ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.
23
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!
24
ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;
25
[ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ.
26
ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
27
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.
28
ನೀನು ಕೂತುಕೊಳ್ಳುವದೂ ಹೋಗುವದೂ ಬರುವದೂ ನನಗೆ ಗೊತ್ತುಂಟು; ನೀನು ನನ್ನ ಮೇಲೆ ರೌದ್ರಾವೇಶನಾಗಿರುವದನ್ನೂ ಬಲ್ಲೆನು.
29
ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.
30
ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.
31
ತಪ್ಪಿಸಿಕೊಂಡುಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
32
ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.
33
ಆತನು ಅಶ್ಶೂರದ ಅರಸನನ್ನು ಕುರಿತು - ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ.
34
ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಬರುವದೇ ಇಲ್ಲ.
35
ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.
36
ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.
37
ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
38
ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಅರಸನಾದನು.
← Chapter 36
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 51
Chapter 52
Chapter 53
Chapter 54
Chapter 55
Chapter 56
Chapter 57
Chapter 58
Chapter 59
Chapter 60
Chapter 61
Chapter 62
Chapter 63
Chapter 64
Chapter 65
Chapter 66
Chapter 38 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
61
62
63
64
65
66