bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Joshua 7
Joshua 7
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 8 →
1
ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದರಿಂದ ಇಸ್ರಾಯೇಲ್ಯರೆಲ್ಲರೂ ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಉರಿಯಹತ್ತಿತು.
2
ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ
3
ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.
4
ಅದರಂತೆ ಸುಮಾರು ಮೂರು ಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರ ಎದುರಿನಿಂದ ಓಡಿ ಬರಬೇಕಾಯಿತು.
5
ಆಯಿ ಎಂಬ ಊರಿನವರು ಅವರನ್ನು ಊರುಬಾಗಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿ ನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಹತಮಾಡಿದರು. ಇದರಿಂದ ಇಸ್ರಾಯೇಲ್ಯರ ಧೈರ್ಯವು ಕರಗಿ ನೀರಾಯಿತು.
6
ಆಗ ಯೆಹೋಶುವನೂ ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿದ್ದರು.
7
ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.
8
ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ. ಇನ್ನೇನು ಹೇಳಲಿ?
9
ಕಾನಾನ್ಯರೂ ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತಿಕೊಂಡು ಭೂಲೋಕದಲ್ಲಿ ನಮ್ಮ ಹೆಸರುಳಿಯದಂತೆ ಮಾಡುವರು. ನಿನ್ನ ಮಹಾನಾಮಕ್ಕೋಸ್ಕರ ಏನು ಮಾಡುವಿ ಅಂದನು.
10
ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನಂದರೆ - ಏಳು, ನೀನು ಈ ಪ್ರಕಾರ ಬೋರಲಬಿದ್ದಿರುವದೇಕೆ?
11
ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿ ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾದರು.
12
ಆದದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸುವರು. ಅವರು ಶಾಪಗ್ರಸ್ತರೇ. ಶಾಪಕ್ಕೆ ಕಾರಣವಾದದ್ದನ್ನು ನಿಮ್ಮ ಮಧ್ಯದಿಂದ ತೆಗೆದು ಹಾಕುವವರೆಗೆ ನಾನು ನಿಮ್ಮ ಸಂಗಡ ಬರುವದಿಲ್ಲ. ಎದ್ದು ಜನರನ್ನು ಶುದ್ಧಪಡಿಸು.
13
ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ.
14
ನಾಳೆ ಬೆಳಿಗ್ಗೆ ನೀವು ಕುಲಕುಲವಾಗಿ ನನ್ನ ಬಳಿಗೆ ಬನ್ನಿರಿ. ಯೆಹೋವನು ಯಾವ ಕುಲವನ್ನು ಹಿಡಿಯುತ್ತಾನೋ ಆ ಕುಲವು ಗೋತ್ರ ಗೋತ್ರವಾಗಿಯೂ, ಯಾವ ಗೋತ್ರವನ್ನು ಹಿಡಿಯುತ್ತಾನೋ ಆ ಗೋತ್ರವು ಕುಟುಂಬ ಕುಟುಂಬವಾಗಿಯೂ, ಯಾವ ಕುಟುಂಬವನ್ನು ಹಿಡಿಯುತ್ತಾನೋ ಆ ಕುಟುಂಬದವರು ಒಬ್ಬೊಬ್ಬರಾಗಿಯೂ ಬರಬೇಕು.
15
ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲ್ಯರಲ್ಲಿ ಬುದ್ಧಿಹೀನಕಾರ್ಯವನ್ನು ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿಸಹಿತವಾಗಿ ಸುಡಲ್ಪಡಬೇಕು ಎಂದು ಹೇಳು ಎಂಬದೇ.
16
ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಲು ಯೆಹೂದ ಕುಲವು ಹಿಡಿಯಲ್ಪಟ್ಟಿತು.
17
ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಆ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.
18
ಆ ಕುಟುಂಬದ ಪುರುಷರನ್ನು ಕರೆದಾಗ ಯೆಹೂದಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಕರ್ಮೀಯ ಮಗನೂ ಆದ ಆಕಾನನು ಹಿಡಿಯಲ್ಪಟ್ಟನು.
19
ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.
20
ಆಕಾನನು ಯೆಹೋಶುವನಿಗೆ - ನಾನು ಕೊಳ್ಳೆಯಲ್ಲಿ ಶಿನಾರ್ ದೇಶದ ಒಂದು ಉತ್ತಮವಾದ ನಿಲುವಂಗಿಯನ್ನೂ ಇನ್ನೂರು ರೂಪಾಯಿ ತೂಕದ ಬೆಳ್ಳಿಯನ್ನೂ ಐವತ್ತು ರೂಪಾಯಿ ತೂಕದ ಬಂಗಾರದ ಗಟ್ಟಿಯನ್ನೂ ಕಂಡು ಅದನ್ನು ಆಶೆಯಿಂದ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹುಗಿದಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿರುತ್ತದೆ. ನಾನು ನಿಜವಾಗಿ ಇಂಥದನ್ನು ಮಾಡಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಉತ್ತರಕೊಟ್ಟನು.
22
ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ನೋಡಲಾಗಿ ಆ ನಿಲುವಂಗಿಯು ಗುಡಾರದಲ್ಲಿ ಹುಗಿದಿತ್ತು. ಬೆಳ್ಳಿಯು ಅದರ ಕೆಳಗಿತ್ತು.
23
ಅವರು ಅವುಗಳನ್ನು ಗುಡಾರದೊಳಗಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.
24
ಮತ್ತು ಯೆಹೋಶುವನೂ ಎಲ್ಲಾ ಇಸ್ರಾಯೇಲ್ಯರೂ ಜೆರಹನ ಮಗನಾದ ಆಕಾನನನ್ನು ಆ ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿ, ಅವನ ಗಂಡು ಹೆಣ್ಣು ಮಕ್ಕಳು, ದನಕರುಗಳು, ಕತ್ತೆಗಳು, ಆಡುಕುರಿಗಳು, ಗುಡಾರವು ಈ ಎಲ್ಲವುಗಳ ಸಹಿತವಾಗಿ ಹಿಡಿದು ಆಕೋರಿನ ತಗ್ಗಿಗೆ ಒಯ್ದರು.
25
ಅಲ್ಲಿ ಯೆಹೋಶುವನು ಅವನಿಗೆ - ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನೂ ಕಲ್ಲೆಸೆದು ಬೆಂಕಿಯಿಂದ ಸುಟ್ಟುಬಿಟ್ಟರು.
26
ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24