bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 6
Judges 6
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 7 →
1
ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ಏಳು ವರುಷಗಳ ಪರ್ಯಂತರ ವಿುದ್ಯಾನ್ಯರ ಕೈಗೆ ಒಪ್ಪಿಸಿದನು.
2
ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು.
3
ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು
4
ಗಾಜಾ ಪ್ರಾಂತದವರೆಗಿದ್ದ ಎಲ್ಲಾ ಭೂವಿುಯ ಹುಟ್ಟುವಳಿಯನ್ನು ಹಾಳುಮಾಡಿಬಿಟ್ಟದರಿಂದ ಇವರಿಗೆ ದವಸ ಧಾನ್ಯವಾಗಲಿ ಕುರಿದನಕತ್ತೆಗಳಾಗಲಿ ಉಳಿಯಲೇ ಇಲ್ಲ.
5
ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ವಿುಡಿತೆಗಳಂತೆ ಗುಂಪುಗುಂಪಾಗಿ ಬಂದರು; ಅವರೂ ಅವರ ಒಂಟೆಗಳೂ ಅಸಂಖ್ಯ. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.
6
ಇಸ್ರಾಯೇಲ್ಯರು ವಿುದ್ಯಾನ್ಯರ ದೆಸೆಯಿಂದ ಬಲು ಕುಗ್ಗಿ ಹೋಗಿ ಯೆಹೋವನಿಗೆ ಮೊರೆಯಿಟ್ಟರು.
7
ಇಸ್ರಾಯೇಲ್ಯರು ವಿುದ್ಯಾನ್ಯರ ಕಾಟವನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ
8
ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು.
9
ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ ಅವರನ್ನು ನಿಮ್ಮೆದುರಿನಿಂದ ಅಟ್ಟಿಬಿಟ್ಟು ಅವರ ದೇಶವನ್ನು ನಿಮಗೆ ಕೊಟ್ಟೆನು.
10
ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.
11
ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
12
ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು.
13
ಆಗ ಗಿದ್ಯೋನನು ಅವನಿಗೆ - ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ವಿುದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ ಅನ್ನಲು
14
ಯೆಹೋವನು ಅವನನ್ನು ಚೆನ್ನಾಗಿ ನೋಡಿ - ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಾಯೇಲ್ಯರನ್ನು ವಿುದ್ಯಾನ್ಯರಿಂದ ಬಿಡಿಸು ಎಂದು ಹೇಳಿದನು.
15
ಆಗ ಗಿದ್ಯೋನನು ಆತನಿಗೆ - ಸ್ವಾಮೀ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು ಅನ್ನಲು
16
ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು.
17
ಅವನು ಆತನಿಗೆ - ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾವಿುಯವರೇ ಆಗಿದ್ದೀರೆಂಬದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.
18
ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು ಎಂದು ಬಿನ್ನವಿಸಲು ಆತನು - ನೀನು ತಿರಿಗಿ ಬರುವವರೆಗೆ ನಾನು ಇಲ್ಲೇ ಇರುವೆನು ಅಂದನು.
19
ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಒಂದು ಏಫಾ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.
20
ಆಗ ದೇವದೂತನು ಅವನಿಗೆ - ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅನ್ನಲು ಅವನು ಹಾಗೆಯೇ ಮಾಡಿದನು.
21
ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.
22
ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು - ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ ಎಂದು ಕೂಗಿದನು.
23
ಆದರೆ ಯೆಹೋವನು ಅವನಿಗೆ - ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವದಿಲ್ಲ ಅಂದನು.
24
ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.
25
ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರುಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡುಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹ ಸ್ತಂಭವನ್ನು ಕಡಿದುಹಾಕಿ
26
ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.
27
ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
28
ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟದ್ದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹ ಸ್ತಂಭವು ಕಡಿಯಲ್ಪಟ್ಟದ್ದನ್ನೂ ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು
29
ಹೀಗೆ ಮಾಡಿದವರಾರು ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಗಲು
30
ಆ ಜನರು ಯೋವಾಷನಿಗೆ - ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಯಾಕಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ಕಡಿದು ಹಾಕಿದ್ದಾನೆ ಅಂದರು.
31
ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ - ಬಾಳನಿಗೋಸ್ಕರ ನೀವು ವ್ಯಾಜ್ಯವಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯವಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿ ಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ ಎಂದನು.
32
ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.
33
ಇಷ್ಟರಲ್ಲಿ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
34
ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.
35
ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್ ಜೆಬುಲೂನ್ ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.
36
ಮತ್ತು ಗಿದ್ಯೋನನು ದೇವರಿಗೆ - ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬದನ್ನು ತಿಳಿಯಪಡಿಸು.
37
ಇಗೋ, ನಾನು ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ, ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು ಎಂಬದಾಗಿ ವಿಜ್ಞಾಪಿಸಿದನು.
38
ಹಾಗೆಯೇ ಆಯಿತು; ಅವನು ಮರುದಿವಸ ಹೊತ್ತಾರೆಯಲ್ಲಿ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.
39
ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು.
40
ಆ ರಾತ್ರಿ ದೇವರು ಹಾಗೆಯೇ ಮಾಡಿದನು; ತುಪ್ಪಟವು ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 7 →
All chapters:
1
2
3
4
5
6
7
8
9
10
11
12
13
14
15
16
17
18
19
20
21