bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Leviticus 5
Leviticus 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 6 →
1
ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
2
ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆಹೋದರೂ ಅವನು ಅಶುದ್ಧನೂ ದೋಷಿಯೂ ಆಗಿರುವನು.
3
ಮನುಷ್ಯದೇಹದಿಂದುಂಟಾದ ಯಾವದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆಹೋದರೂ ತಿಳಿದುಬಂದಾಗ ಅವನು ದೋಷಿಯಾಗುವನು.
4
ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.
5
ಅವನು ಈ ವಿಷಯಗಳಲ್ಲಿ ಯಾವದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು;
6
ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.
7
ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.
8
ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಅದರ ತಲೆಯನ್ನು ಪೂರಾ ತೆಗೆದು ಬಿಡಕೂಡದು.
9
ಆಗ ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿವಿುಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರಕಯಜ್ಞ.
10
ಮತ್ತೊಂದನ್ನು ಯಥಾವಿಧಿಯಾಗಿ ಸರ್ವಾಂಗಹೋಮ ಮಾಡಿಬಿಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.
11
ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.
12
ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೇವಾರ್ಪಿತವೆಂದು ಸೂಚಿಸುವದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕಯಜ್ಞ.
13
ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವದು. ನೈವೇದ್ಯದ್ರವ್ಯದಲ್ಲಿ ವಿುಕ್ಕದ್ದು ಹೇಗೆ ಯಾಜಕನಿಗೆ ಆಗುತ್ತದೋ ಇದರಲ್ಲಿಯೂ ವಿುಕ್ಕದ್ದು ಯಾಜಕನಿಗೆ ಆಗಬೇಕು.
14
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
15
ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.
16
ಮತ್ತು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.
17
ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
18
ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ನಿಮಗೆ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವದು.
19
ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 6 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27