bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 14
Luke 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 15 →
1
ಆತನು ಸಬ್ಬತ್ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
2
ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವದನ್ನು ನೋಡಿ -
3
ಸಬ್ಬತ್ದಿನದಲ್ಲಿ ಸ್ವಸ್ಥಮಾಡುವದು ಸರಿಯೋ? ಸರಿಯಲ್ಲವೋ ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
4
ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನಿಗೆ ವಾಸಿಮಾಡಿ ಕಳುಹಿಸಿ -
5
ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ದಿನದಲ್ಲಾದರೂ ಮೇಲಕ್ಕೆ ತೆಗೆಯುವದಿಲ್ಲವೇ ಎಂದು ಅವರನ್ನು ಕೇಳಿದನು.
6
ಅವರು ಅದಕ್ಕೆ ಉತ್ತರ ಕೊಡಲಾರದೆ ಇದ್ದರು.
7
ಊಟಕ್ಕೆ ಕರಿಸಿಕೊಂಡವರು ಪಂಙ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. ಏನಂದರೆ -
8
ಯಾವನಾದರೂ ನಿನ್ನನ್ನು ಮದುವೇ ಊಟಕ್ಕೆ ಕರೆದರೆ ಪಂಙ್ತಿಯೊಳಗೆ ಮೊದಲನೆಯ ಸ್ಥಾನದಲ್ಲಿ ಕೂತುಕೊಳ್ಳಬೇಡ; ಒಂದು ವೇಳೆ ನಿನಗಿಂತ ಮಾನವುಳ್ಳವನನ್ನು ಅವನು ಕರೆದಿರಬಹುದು,
9
ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು - ಇವನಿಗೆ ಸ್ಥಳಬಿಡು ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕೂತುಕೊಳ್ಳುವದಕ್ಕೆ ಹೋಗುವಿ.
10
ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕೂತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ ಅನ್ನುವನು. ಆಗ ನಿನ್ನ ಸಂಗಡ ಕೂತಿರುವವರೆಲ್ಲರ ಮುಂದೆ ನಿನಗೆ ಮಾನ ಬರುವದು.
11
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
12
ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.
13
ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;
14
ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.
15
ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು
16
ಯೇಸು ಅವನಿಗೆ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ದೊಡ್ಡ ಅಡಿಗೆ ಮಾಡಿಸಿ ಅನೇಕರಿಗೆ ಊಟಕ್ಕೆ ಹೇಳಿಸಿದನು.
17
ಆಮೇಲೆ ಊಟದ ಹೊತ್ತಿಗೆ ಅವನು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ - ಈಗ ಸಿದ್ಧವಾಗಿದೆ, ಬರಬೇಕು ಎಂದು ಕರೆಯುವದಕ್ಕೆ ತನ್ನ ಆಳನ್ನು ಕಳುಹಿಸಿದನು.
18
ಆದರೆ ಅವರೆಲ್ಲರೂ ಕ್ಷವಿುಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ - ಹೊಲವನ್ನು ಕ್ರಯಕ್ಕೆ ತಕ್ಕೊಂಡಿದ್ದೇನೆ, ಅದನ್ನು ಹೋಗಿ ನೋಡುವದಕ್ಕೆ ನನಗೆ ಅಗತ್ಯವಿದೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.
19
ಮತ್ತೊಬ್ಬನು - ನಾನು ಐದು ಜೋಡಿ ಎತ್ತುಗಳನ್ನು ತಕ್ಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕೆ ಹೋಗುತ್ತೇನೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.
20
ಇನ್ನೊಬ್ಬನು - ನಾನು ಮದುವೆಮಾಡಿಕೊಂಡಿದ್ದೇನೆ, ಆದ್ದರಿಂದ ನಾನು ಬರುವದಕ್ಕಾಗುವದಿಲ್ಲ ಅಂದನು.
21
ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೇಯಜಮಾನನು ಸಿಟ್ಟುಗೊಂಡು ಆಳಿಗೆ - ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು ಊನವಾದವರು ಕುರುಡರು ಕುಂಟರು ಇಂಥವರನ್ನು ಇಲ್ಲಿಗೆ ಕರಕೊಂಡು ಬಾ ಎಂದು ಹೇಳಿದನು.
22
ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು.
23
ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.
24
ಆದರೆ ಊಟಕ್ಕೆ ಹೇಳಿಸಿಕೊಂಡವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ಸವಿಯನ್ನು ನೋಡಬಾರದು ಎಂದು ನಿಮಗೆ ಹೇಳುತ್ತೇನೆ ಅಂದನು.
25
ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ -
26
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
27
ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬಂದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
28
ನಿಮ್ಮಲ್ಲಿ ಯಾವನಾದರೂ ಒಂದು ಬುರುಜನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕೂತುಕೊಂಡು - ಅದಕ್ಕೆ ಎಷ್ಟು ಖರ್ಚು ಹಿಡಿದೀತು, ಅದನ್ನು ತೀರಿಸುವದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಉಂಟೋ ಎಂದು ಲೆಕ್ಕಮಾಡುವದಿಲ್ಲವೇ?
29
ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು -
30
ಈ ಮನುಷ್ಯನು ಕಟ್ಟಿಸುವದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆಹೋದನು ಎಂದು ಅವನನ್ನು ಹಾಸ್ಯಮಾಡಾರು.
31
ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕೂತುಕೊಂಡು ಆಲೋಚಿಸುವದಿಲ್ಲವೇ?
32
ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಕೇಳಿಕೊಳ್ಳುವನು.
33
ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
34
ಉಪ್ಪಂತೂ ಒಳ್ಳೆಯ ಪದಾರ್ಥವೇ; ಉಪ್ಪು ಸಹ ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬಂದೀತು?
35
ಅದು ಭೂವಿುಗಾದರೂ ತಿಪ್ಪೆಗಾದರೂ ಉಪಯೋಗವಲ್ಲ; ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24