bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 20
Luke 20
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
1
ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು
2
ಫಕ್ಕನೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು, ನಮಗೆ ಹೇಳು ಎಂದು ಆತನನ್ನು ಕೇಳಲು
3
ಆತನು ಅವರಿಗೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
4
ದೀಕ್ಷಾಸ್ನಾನಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ ಮನುಷ್ಯರಿಂದ ಬಂತೋ ಎಂದು ಅವರನ್ನು ಕೇಳಿದನು.
5
ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು;
6
ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು
7
ಅದು ಎಲ್ಲಿಂದ ಬಂತೋ ನಾವರಿಯೆವು ಎಂದು ಉತ್ತರಕೊಟ್ಟರು.
8
ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು.
9
ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
10
ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.
11
ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನ ಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು.
12
ಆಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯವಾಗುವಷ್ಟು ಹೊಡೆದು ಹೊರಕ್ಕೆ ಅಟ್ಟಿದರು.
13
ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು.
14
ಆದರೆ [ಕಳುಹಿಸಿದಾಗ] ಆ ಒಕ್ಕಲಿಗರು ಅವನನ್ನು ಕಂಡು - ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯ ನಮ್ಮದಾಗಲಿ ಎಂದು ಒಬ್ಬರಸಂಗಡಲೊಬ್ಬರು ಮಾತಾಡಿಕೊಂಡು
15
ಅವನನ್ನು ದ್ರಾಕ್ಷೆಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಹಾಗಾದರೆ ದ್ರಾಕ್ಷೆಯತೋಟದ ಧಣಿಯು ಅವರಿಗೆ ಏನು ಮಾಡುವನು?
16
ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.
17
ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ ಮನೇ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು?
18
ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುವದೋ ಅವನನ್ನು ಪುಡಿ ಪುಡಿ ಮಾಡುವದು ಅಂದನು.
19
ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.
20
ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.
21
ಇವರು - ಬೋಧಕನೇ, ನೀನು ಸರಿಯಾಗಿ ಮಾತಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
22
ಕೈಸರನಿಗೆ ಕಂದಾಯ ಕೊಡುವದು ಸರಿಯೋ ಸರಿಯಲ್ಲವೋ ಎಂದು ಆತನನ್ನು ಕೇಳಿದರು.
23
ಆತನು ಅವರ ಕುಯುಕ್ತಿಯನ್ನು ಕಂಡುಕೊಂಡು
24
ಅವರಿಗೆ - ನನಗೆ ಒಂದು ಹಣವನ್ನು ತೋರಿಸಿರಿ. ಇದರಲ್ಲಿ ಯಾರ ತಲೆಯೂ ಮುದ್ರೆಯೂ ಅದೆ ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.
25
ಆತನು ಅವರಿಗೆ - ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು.
26
ಆತನ ಮಾತಿನಲ್ಲಿ ಅವರು ಜನರ ಮುಂದೆ ಏನೂ ಹಿಡಿಯಲಾರದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮಗಾದರು.
27
ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ -
28
ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
29
ಒಳ್ಳೇದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಹೆಂಡತಿಯನ್ನು ಮಾಡಿಕೊಂಡು ಮಕ್ಕಳಿಲ್ಲದೆ ಸತ್ತನು.
30
ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮಾಡಿಕೊಂಡು ಮಕ್ಕಳಿಲ್ಲದೆ ಸತ್ತರು.
32
ಕಡೆಯಲ್ಲಿ ಆ ಸ್ತ್ರೀಯೂ ಸತ್ತಳು.
33
ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ ಅಂದರು.
34
ಯೇಸು ಅವರಿಗೆ - ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ, ಮದುವೆಮಾಡಿಕೊಡುತ್ತಾರೆ;
35
ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ.
36
ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ.
37
ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ.
38
ಆತನಿಗೆ ಎಲ್ಲರೂ ಜೀವಿಸುವವರೇ ಎಂದು ಹೇಳಿದನು.
39
ಶಾಸ್ತ್ರಿಗಳಲ್ಲಿ ಕೆಲವರು - ಬೋಧಕನೇ, ಚೆನ್ನಾಗಿ ಹೇಳಿದಿ ಅಂದರು.
40
ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
41
ಆಗ ಆತನು - ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
42
ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ಕೀರ್ತನಗ್ರಂಥದಲ್ಲಿ ದಾವೀದನೇ ಹೇಳುತ್ತಾನಷ್ಟೆ.
44
ದಾವೀದನು ಆತನನ್ನು ಒಡೆಯನೆಂದು ಹೇಳಿದ ಮೇಲೆ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಅವರನ್ನು ಕೇಳಿದನು.
45
ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ -
46
ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಇವುಗಳಲ್ಲಿ ಇಷ್ಟವುಳ್ಳವರೂ ಆಗಿದ್ದಾರೆ.
47
ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24