bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 16
Matthew 16
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 17 →
1
ತರುವಾಯ ಫರಿಸಾಯರೂ ಸದ್ದುಕಾಯರೂ ಬಂದು ಆತನನ್ನು ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳಿದರು. ಆತನು ಅವರಿಗೆ -
2
ಸಂಜೇವೇಳೆಯಲ್ಲಿ ನೀವು - ಆಕಾಶವು ಕೆಂಪಾಗಿದೆ, ನಿರ್ಮಲದಿನ ಬರುವದು ಅನ್ನುತ್ತೀರಿ;
3
ಬೆಳಿಗ್ಗೆ - ಆಕಾಶವು ಮೋಡಮುಚ್ಚಿಕೊಂಡು ಕೆಂಪಾಗಿದೆ, ಈ ಹೊತ್ತು ಗಾಳಿ ಮಳೆ ಅನ್ನುತ್ತೀರಿ ಅಲ್ಲವೇ. ಆಕಾಶದ ಸ್ಥಿತಿಯನ್ನು ನೋಡಿ ಇದು ಹೀಗೆ ಅದು ಹಾಗೆ ಅನ್ನುವದಕ್ಕೆ ಬಲ್ಲಿರಿ; ಆದರೆ ಈ ಕಾಲದ ಸೂಚನೆಗಳನ್ನು ತಿಳುಕೊಳ್ಳಲಾರಿರಿ.
4
ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.
5
ಶಿಷ್ಯರು ರೊಟ್ಟೀಬುತ್ತಿ ಕಟ್ಟಿಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಾಗ ಯೇಸು ಅವರಿಗೆ -
6
ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಎಂದು ಹೇಳಲು ಅವರು -
7
ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.
8
ಯೇಸು ಅದನ್ನು ತಿಳಿದು - ಅಲ್ಪವಿಶ್ವಾಸಿಗಳೇ, ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಮಾತಾಡಿಕೊಳ್ಳುವದೇಕೆ?
9
ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ನೆನಪಿಲ್ಲವೋ? ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಪುಟ್ಟಿ ತುಂಬಿಟ್ಟಿರಿ?
10
ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿಸಿದಾಗ ಎಷ್ಟು ಹೆಡಿಗೆ ತುಂಬಿಟ್ಟಿರಿ?
11
ನಾನು ರೊಟ್ಟಿಯನ್ನು ಕುರಿತು ಮಾತಾಡಲಿಲ್ಲವೆಂಬದು ನಿಮಗೆ ತಿಳಿಯದೆ ಇರುವದು ಹೇಗೆ? ಎಚ್ಚರಿಕೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ ಅಂದನು.
12
ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.
13
ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ - ಜನರು ಮನುಷ್ಯಕುಮಾರನೆಂಬ ನನ್ನನ್ನು ಯಾರು ಅನ್ನುತ್ತಾರೆ ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ ಅವರು -
14
ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ, ಬೇರೆ ಕೆಲವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.
15
ಆತನು ಅವರನ್ನು - ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಲಾಗಿ ಸೀಮೋನ್ ಪೇತ್ರನು -
16
ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.
17
ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.
18
ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.
19
ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.
20
ಆಗ ಆತನು - ನಾನು ಕ್ರಿಸ್ತನಾಗಿದ್ದೇನೆಂಬದನ್ನು ಯಾರಿಗೂ ಹೇಳಬೇಡಿರಿ ಎಂದು ಶಿಷ್ಯರಿಗೆ ಖಂಡಿತವಾಗಿ ಹೇಳಿದನು.
21
ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.
22
ಆಗ ಪೇತ್ರನು ಆತನ ಕೈಹಿಡಿದು - ಸ್ವಾಮೀ, ದೇವರು ನಿನ್ನನ್ನು ಕಾಯಲಿ; ನಿನಗೆ ಹೀಗೆ ಎಂದಿಗೂ ಆಗಬಾರದು ಎಂದು ಆತನನ್ನು ಗದರಿಸುವದಕ್ಕೆ ಪ್ರಾರಂಭಿಸಲು
23
ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.
24
ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.
25
ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.
26
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?
27
ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.
28
ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28