bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 20
Matthew 20
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 21 →
1
ಅದು ಹೇಗಂದರೆ - ಪರಲೋಕರಾಜ್ಯವು ಒಬ್ಬ ಮನೆಯ ಯಜಮಾನನಿಗೆ ಹೋಲಿಕೆಯಾಗಿದೆ. ಅವನು ತನ್ನ ದ್ರಾಕ್ಷೇತೋಟಕ್ಕೆ ಕೂಲೀ ಆಳುಗಳನ್ನು ಕರೆಯುವದಕ್ಕೆ ಬೆಳಿಗ್ಗೆ ಹೊರಟನು.
2
ಆಳಿಗೆ ದಿನಕ್ಕೆ ಒಂದು ಪಾವಲಿಯಂತೆ ಕೂಲಿ ಗೊತ್ತುಮಾಡಿ ಅವರನ್ನು ದ್ರಾಕ್ಷೇತೋಟಕ್ಕೆ ಕಳುಹಿಸಿದನು.
3
ತರುವಾಯ ಹೆಚ್ಚುಕಡಿಮೆ ಒಂಭತ್ತು ಗಂಟೆಗೆ ಹೋಗಿ ಪೇಟೆಯಲ್ಲಿ ಸುಮ್ಮನೆ ನಿಂತಿದ್ದ ಇನ್ನು ಕೆಲವರನ್ನು ಕಂಡು -
4
ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ ಅನ್ನಲು ಅವರು ತೋಟಕ್ಕೆ ಹೋದರು.
5
ಅವನು ತಿರಿಗಿ ಹೆಚ್ಚುಕಡಿಮೆ ಹನ್ನೆರಡು ಗಂಟೆಗೆ ಮತ್ತು ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
6
ತಿರಿಗಿ ಹೆಚ್ಚುಕಡಿಮೆ ಸಾಯಂಕಾಲ ಐದು ಗಂಟೆಗೆ ಹೋಗಿ ಬೇರೆ ಕೆಲವರು ನಿಂತಿರುವದನ್ನು ಕಂಡು ಅವರನ್ನು - ದಿನವೆಲ್ಲಾ ಇಲ್ಲಿ ಯಾಕೆ ಸುಮ್ಮನೆ ನಿಂತಿದ್ದೀರಿ ಎಂದು ಕೇಳಲು
7
ಅವರು - ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದಾಗ ಅವನು - ನೀವು ಸಹ ನನ್ನ ದ್ರಾಕ್ಷೇತೋಟಕ್ಕೆ ಹೋಗಿರಿ ಅಂದನು.
8
ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.
9
ಆಗ ಸಾಯಂಕಾಲ ಐದು ಗಂಟೆಗೆ ಬಂದವರಿಗೆ ಒಂದೊಂದು ಪಾವಲಿ ಸಿಕ್ಕಿತು.
10
ತರುವಾಯ ಮೊದಲಿನವರು ಬಂದು ತಮಗೆ ಹೆಚ್ಚು ದೊರೆಯುವದೆಂದು ನೆನಸಿದರು; ಆದರೆ ಇವರಿಗೆ ಸಹ ಒಂದೊಂದು ಪಾವಲಿಯೇ ಸಿಕ್ಕಿತು.
11
ಅದನ್ನು ತೆಗೆದುಕೊಂಡು ಮನೆಯ ಯಜಮಾನನ ಮೇಲೆ ಗುಣುಗುಟ್ಟಿ -
12
ಕಡೆಗೆ ಬಂದ ಇವರು ಒಂದು ತಾಸು ಹೊತ್ತು ಮಾತ್ರ ಕೆಲಸ ಮಾಡಿದ್ದಾರೆ; ನಾವು ದಿನವೆಲ್ಲಾ ಬಿಸಲಿನಲ್ಲಿ ಕೆಲಸ ಮಾಡಿ ಕಷ್ಟಪಟ್ಟಿದ್ದೇವೆ; ಇವರನ್ನು ನಮಗೆ ಸಮಮಾಡಿದ್ದೀಯೆ ಅಂದರು.
13
ಅದಕ್ಕೆ ಅವನು ಅವರಲ್ಲಿ ಒಬ್ಬನಿಗೆ - ಏನಪ್ಪಾ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ನೀನು ನನ್ನ ಸಂಗಡ ಒಂದು ಪಾವಲಿಗೆ ಒಡಂಬಟ್ಟಿಯಲ್ಲಾ;
14
ನಿನ್ನ ಕೂಲಿ ತಕ್ಕೊಂಡು ಹೋಗು; ನಿನಗೆ ಕೊಟ್ಟಂತೆ ಕಡೆಗೆ ಬಂದ ಇವನಿಗೂ ಕೊಡುವದಕ್ಕೆ ನನಗೆ ಮನಸ್ಸುಂಟು.
15
ನನ್ನ ಬದುಕನ್ನು ನಾನು ಬೇಕಾದ ಹಾಗೆ ಮಾಡಬಹುದಲ್ಲವೋ? ನಾನು ಒಳ್ಳೆಯವನಾಗಿರುವದು ನಿನ್ನ ಕಣ್ಣನ್ನು ಒತ್ತುತ್ತದೋ ಎಂದು ಹೇಳಿದನು.
16
ಈ ಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು.
17
ಯೇಸು ಯೆರೂಸಲೇವಿುಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ಒತ್ತಟ್ಟಿಗೆ ಕರೆದುಕೊಂಡು ದಾರಿಯಲ್ಲಿ ಅವರಿಗೆ -
18
ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು.
19
ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅಪಹಾಸ್ಯ ಮಾಡುವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಅನ್ಯರ ಕೈಗೆ ಒಪ್ಪಿಸುವರು; ಅವನು ಸತ್ತ ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು.
20
ಆಗ ಜೆಬೆದಾಯನ ಮಕ್ಕಳ ತಾಯಿ ಆತನಿಂದ ಏನೋ ಒಂದು ಬೇಡಿಕೊಳ್ಳಬೇಕೆಂದು ತನ್ನ ಮಕ್ಕಳನ್ನು ಕರಕೊಂಡು ಬಂದು ಆತನಿಗೆ ಅಡ್ಡಬಿದ್ದಳು.
21
ಆತನು ಆಕೆಯನ್ನು - ನಿನಗೇನು ಬೇಕಮ್ಮಾ ಎಂದು ಕೇಳಲು ಆಕೆ - ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವದಕ್ಕೆ ಅಪ್ಪಣೆಯಾಗಬೇಕು ಅಂದಳು.
22
ಅದಕ್ಕೆ ಯೇಸು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾತ್ರೆಯಲ್ಲಿ ನೀವು ಕುಡಿಯುವದು ನಿವ್ಮಿುಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.
23
ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.
24
ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಅಣ್ಣತಮ್ಮಂದಿರ ಮೇಲೆ ಸಿಟ್ಟುಗೊಂಡರು.
25
ಆದರೆ ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ - ಜನಗಳನ್ನಾಳುವವರು ಅವರ ಮೇಲೆ ಅಹಂಕಾರದಿಂದ ದೊರೆತನಮಾಡುತ್ತಾರೆ, ಮತ್ತು ದೊಡ್ಡವರು ಬಲಾತ್ಕಾರದಿಂದ ಅಧಿಕಾರ ನಡಿಸುತ್ತಾರೆ ಎಂದು ನೀವು ಬಲ್ಲಿರಷ್ಟೆ.
26
ನಿಮ್ಮಲ್ಲಿ ಹಾಗಿರಬಾರದು; ಆದರೆ ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು;
27
ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ನಿಮ್ಮ ಆಳಾಗಿರಬೇಕು.
28
ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
29
ಅವರು ಯೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನ ಹಿಂದೆ ಹೋಯಿತು.
30
ಆಗ ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು, ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗಿಕೊಂಡರು.
31
ಆ ಗುಂಪಿನವರು - ಸುಮ್ಮನಿರಿ ಎಂದು ಅವರನ್ನು ಗದರಿಸಲು ಅವರು - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
32
ಆಗ ಯೇಸು ನಿಂತು ಅವರನ್ನು ಕರೆದು - ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ ಎಂದು ಕೇಳಲು
33
ಅವರು - ನಮ್ಮ ಕಣ್ಣುಗಳು ತೆರೆಯಲ್ಪಡಬೇಕು, ಸ್ವಾಮೀ ಅಂದರು.
34
ಆಗ ಯೇಸು ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೆ ಅವರಿಗೆ ಕಣ್ಣು ಬಂದವು, ಅವರು ಆತನ ಹಿಂದೆ ಹೋದರು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28