bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 21
Matthew 21
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 22 →
1
ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ
2
ಯೇಸು ಇಬ್ಬರು ಶಿಷ್ಯರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರ ಕೂಡ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತರಕ್ಕೆ ಹಿಡುಕೊಂಡು ಬನ್ನಿರಿ.
3
ಯಾವನಾದರೂ ನಿಮಗೆ ಏನಾದರೂ ಹೇಳಿದರೆ, ಇವು ಸ್ವಾವಿುಯವರಿಗೆ ಬೇಕಾಗಿವೆ ಅನ್ನಿರಿ; ಕೂಡಲೆ ಅವುಗಳನ್ನು ಬಿಟ್ಟುಕೊಡುವನು ಎಂದು ಹೇಳಿ ಕಳುಹಿಸಿದನು.
4
ಒಬ್ಬ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದು ಆಯಿತು; ಆ ಮಾತು ಏನಂದರೆ -
5
ಚೀಯೋನ್ ನಗರಿಗೆ - ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು ಹೇಳಿರಿ ಎಂಬದು.
6
ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ
7
ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಆತನು ಹತ್ತಿ ಕೂತುಕೊಂಡನು.
8
ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ಚಿಗುರುಗಳನ್ನು ಕೊಯಿದು ದಾರಿಯಲ್ಲಿ ಹರಡುತ್ತಿದ್ದರು.
9
ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.
10
ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು.
11
ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.
12
ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ
13
ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.
14
ಆಗ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಅವರನ್ನು ಸ್ವಸ್ಥಮಾಡಿದನು.
15
ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು
16
ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.
17
ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಇಳುಕೊಂಡನು.
18
ಬೆಳಿಗ್ಗೆ ಆತನು ಪಟ್ಟಣಕ್ಕೆ ತಿರಿಗಿ ಹೋಗುತ್ತಿರುವಾಗ ಹಸಿದನು.
19
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣದೆ ಅದಕ್ಕೆ - ಇನ್ನು ಮೇಲೆ ನಿನ್ನಲ್ಲಿ ಫಲವು ಎಂದೆಂದಿಗೂ ಆಗದೆಹೋಗಲಿ ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
20
ಶಿಷ್ಯರು ಅದನ್ನು ನೋಡಿ ಬೆರಗಾಗಿ - ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿ ಹೋಯಿತಲ್ಲಾ; ಅದು ಹೇಗೆ? ಅಂದರು.
21
ಅದಕ್ಕೆ ಯೇಸು - ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ನಾನು ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ. ಇದು ಮಾತ್ರವಲ್ಲದೆ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೆ ಅದೂ ಆಗುವದು.
22
ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ ಅಂದನು.
23
ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು
24
ಯೇಸು ಅವರಿಗೆ ಹೇಳಿದ್ದೇನಂದರೆ - ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನೂ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ.
25
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ? ಮನುಷ್ಯರಿಂದಲೋ ಅಂದನು. ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ನಮಗೆ ಹೇಳಾನು;
26
ಮನುಷ್ಯರಿಂದ ಬಂತೆಂದು ಹೇಳಿದರೆ ನಮಗೆ ಜನರ ಭಯವದೆ; ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸಿದ್ದಾರಲ್ಲಾ ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.
27
ಕಡೆಗೆ ಅವರು - ನಾವರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ - ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ.
28
ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು - ಮಗನೇ, ಹೋಗಿ ಈ ಹೊತ್ತು ದ್ರಾಕ್ಷೇತೋಟದಲ್ಲಿ ಕೆಲಸಮಾಡು ಅಂದಾಗ
29
ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.
30
ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು - ಹೋಗುತ್ತೇನಪ್ಪಾ ಅಂದಾಗ್ಯೂ ಹೋಗಲೇ ಇಲ್ಲ.
31
ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
32
ಯೋಹಾನನು ಧರ್ಮಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು, ನೀವು ಅವನನ್ನು ನಂಬಲಿಲ್ಲ; ಭ್ರಷ್ಟರೂ ಸೂಳೆಯರೂ ಅವನನ್ನು ನಂಬಿದರು; ನೀವು ಇದನ್ನು ನೋಡಿದಾಗ್ಯೂ ಪಶ್ಚಾತ್ತಾಪಪಡಲಿಲ್ಲ, ಅವನನ್ನು ನಂಬಲಿಲ್ಲ.
33
ಮತ್ತೊಂದು ಸಾಮ್ಯವನ್ನು ಕೇಳಿರಿ - ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷೇತೋಟವನ್ನು ಮಾಡಿ ಅದರ ಸುತ್ತಲೂ ಬೇಲಿಹಾಕಿಸಿ ಅದರಲ್ಲಿ ದ್ರಾಕ್ಷೆಯ ಆಲೆಯನ್ನು ಮಾಡಿಸಿ ಹೂಡೆಯನ್ನು ಕಟ್ಟಿಸಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋದನು.
34
ಫಲಕಾಲ ಹತ್ತರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವದಕ್ಕಾಗಿ ಆ ಒಕ್ಕಲಿಗರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು
35
ಒಕ್ಕಲಿಗರು ಅವನ ಆಳುಗಳನ್ನು ಹಿಡುಕೊಂಡು ಒಬ್ಬನನ್ನು ಹೊಡೆದರು, ಒಬ್ಬನನ್ನು ಕಡಿದು ಹಾಕಿದರು, ಒಬ್ಬನನ್ನು ಕಲ್ಲೆಸೆದು ಕೊಂದರು.
36
ಪುನಃ ಮೊದಲಿನವರಿಗಿಂತ ಹೆಚ್ಚುಮಂದಿ ಆಳುಗಳನ್ನು ಕಳುಹಿಸಿದನು, ಅವರಿಗೂ ಹಾಗೆಯೇ ಮಾಡಿದರು.
37
ಕಡೆಯಲ್ಲಿ ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.
38
ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು
39
ಅವನನ್ನು ಹಿಡಿದು ದ್ರಾಕ್ಷೇತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು.
40
ಹಾಗಾದರೆ ದ್ರಾಕ್ಷೇತೋಟದ ಧಣಿಯು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡುವನು ಅಂದನು.
41
ಅವರು ಆತನಿಗೆ - ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ಕಾಲಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ಒಕ್ಕಲಿಗರಿಗೆ ತನ್ನ ತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
42
ಯೇಸು ಅವರಿಗೆ - ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?
43
ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.
44
ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.
45
ಮಹಾಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತಾಡುತ್ತಾನೆಂದು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು;
46
ಆದರೆ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28