bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Matthew 27
Matthew 27
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 28 →
1
ಬೆಳಗಾಗಲು ಎಲ್ಲಾ ಮಹಾಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಆಲೋಚನೆ ಮಾಡಿಕೊಂಡು
2
ಆತನನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.
3
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾಯಿತೆಂದು ನೋಡಿ ಪಶ್ಚಾತ್ತಾಪಪಟ್ಟು ಆ ಮೂವತ್ತು ರೂಪಾಯಿಗಳನ್ನು ಮಹಾಯಾಜಕರಿಗೂ ಹಿರಿಯರಿಗೂ ತಿರಿಗಿ ತಂದು -
4
ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.
5
ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.
6
ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು.
7
ಬಳಿಕ ಆಲೋಚನೆ ಮಾಡಿ, ಪರದೇಶಿಗಳನ್ನು ಹೂಣುವದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂವಿುಯನ್ನು ಕೊಂಡುಕೊಂಡರು.
8
ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಅದೆ.
9
ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು, ಅದೇನಂದರೆ - ಅವರು ಆ ಮೂವತ್ತು ರೂಪಾಯಿ ತೆಗೆದುಕೊಂಡು
10
ಕರ್ತನು ನನಗೆ ಅಪ್ಪಣೆಮಾಡಿದಂತೆ ಅದನ್ನು ಕುಂಬಾರನ ಹೊಲಕ್ಕೆ ಕೊಟ್ಟರು. ಇದೇ ಅವರು ಕ್ರಯಕಟ್ಟಿದವನ ಬೆಲೆ, ಇದೇ ಇಸ್ರಾಯೇಲ್ಯರಲ್ಲಿ ಕೆಲವರು ಕ್ರಯಕಟ್ಟಿದವನ ಬೆಲೆ ಎಂಬದು.
11
ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು. ಯೇಸು - ನೀನೇ ಹೇಳಿದ್ದೀ ಅಂದನು.
12
ಮತ್ತು ಮಹಾಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನೂ ಉತ್ತರಕೊಡಲಿಲ್ಲ.
13
ಆಗ ಪಿಲಾತನು ಆತನನ್ನು - ಇವರು ನಿನ್ನ ಮೇಲೆ ಎಷ್ಟು ಸಾಕ್ಷಿ ಹೇಳುತ್ತಾರೆ, ನೀನು ಕೇಳುವದಿಲ್ಲವೋ? ಎಂದು ಕೇಳಿದನು.
14
ಆತನು ಅವನಿಗೆ ಒಂದು ಮಾತಿಗಾದರೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ಬಹಳ ಆಶ್ಚರ್ಯಪಟ್ಟನು.
15
ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವದು ದೇಶಾಧಿಪತಿಯ ಪದ್ಧತಿಯಾಗಿತ್ತು.
16
ಆ ಕಾಲದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಒಬ್ಬ ಸೆರೆಯವನು ಸಿಕ್ಕಿಬಿದ್ದನು.
17
ಹೀಗಿರಲಾಗಿ ಅವರು ಕೂಡಿಬಂದ ಸಮಯದಲ್ಲಿ ಪಿಲಾತನು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ತಿಳಿದು - ನಿಮಗೆ ಯಾರನ್ನು ಬಿಟ್ಟುಕೊಡಬೇಕನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ ಎಂದು ಅವರನ್ನು ಕೇಳಿದನು.
19
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.
20
ಅತ್ತಲಾಗಿ ಮಹಾಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟು ಕೊಡಬೇಕೆಂದು ಬೇಡಿಕೊಳ್ಳುವ ಹಾಗೂ ಯೇಸುವನ್ನು ನಾಶಗೊಳಿಸುವ ಹಾಗೂ ಜನರನ್ನು ಒಡಂಬಡಿಸಿದರು.
21
ಅದಕ್ಕೆ ದೇಶಾಧಿಪತಿಯು ಅವರನ್ನು - ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ ಎಂದು ಕೇಳಲು - ಬರಬ್ಬನನ್ನು ಅಂದರು.
22
ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು.
23
ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.
24
ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -
25
ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.
26
ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
27
ಆಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಕ್ಕೆ ತೆಗೆದುಕೊಂಡುಹೋಗಿ ಪಟಾಲಮನ್ನೆಲ್ಲಾ ಆತನ ಸುತ್ತಲು ಕೂಡಿಸಿಕೊಂಡು
28
ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ಒಲ್ಲಿಯನ್ನು ಹೊದಿಸಿ
29
ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನನ್ನು ಪರಿಹಾಸ್ಯಮಾಡಿದರು.
30
ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ಕಸಕೊಂಡು ಆತನ ತಲೆಯ ಮೇಲೆ ಹೊಡೆದರು.
31
ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡುಹೋದರು.
32
ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.
33
ಮತ್ತು ಗೊಲ್ಗೊಥಾ ಅಂದರೆ ಕಪಾಸ್ಥಳ ಎಂಬ ಸ್ಥಾನಕ್ಕೆ ಬಂದಾಗ
34
ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
35
ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
36
ಮತ್ತು ಅಲ್ಲಿ ಕೂತುಕೊಂಡು ಆತನನ್ನು ಕಾಯುತ್ತಾ ಇದ್ದರು.
37
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ - ಇವನು ಯೇಸು, ಯೆಹೂದ್ಯರ ಅರಸನು ಎಂಬದೇ.
38
ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಒಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
39
ಅಲ್ಲಿ ಹಾದುಹೋಗುವವರು ತಲೇ ಆಡಿಸಿ -
40
ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.
41
ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ -
42
ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.
43
ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.
44
ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
45
ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
46
ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
47
ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ - ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
48
ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
49
ವಿುಕ್ಕಾದವರು - ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ ಅಂದರು.
50
ಯೇಸು ತಿರಿಗಿ ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
51
ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;
52
ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.
53
ಮತ್ತು ಆತನು ಎದ್ದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
54
ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.
55
ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದಿದ್ದರು.
56
ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
57
ಸಂಜೆಯಾದಾಗ ಅರಿಮಥಾಯದ ಯೋಸೇಫನೆಂಬ ಒಬ್ಬ ಧನವಂತನು ಬಂದನು; ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
58
ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲಾಗಿ ಪಿಲಾತನು ಅದನ್ನು ಕೊಡಬೇಕೆಂದು ಅಪ್ಪಣೆಮಾಡಿದನು.
59
ಯೋಸೇಫನು ಆ ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
60
ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು.
61
ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕೂತಿದ್ದರು.
62
ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಮಹಾಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಕೂಡಿಬಂದು -
63
ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;
64
ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ ಎಂದು ಹೇಳಾರು; ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು ಅಂದರು.
65
ಪಿಲಾತನು ಅವರಿಗೆ - ಕಾವಲುಗಾರರನ್ನು ತಕ್ಕೊಳ್ಳಿ; ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ ಎಂದು ಹೇಳಲಾಗಿ
66
ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು.
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 28 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28