bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Proverbs 19
Proverbs 19
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 20 →
1
ಕಪಟವಾಗಿ ಮಾತಾಡುವ ಮೂಢನಿಗಿಂತಲೂ ನಿರ್ದೋಷವಾಗಿ ನಡೆಯುವ ದರಿದ್ರನೇ ಶ್ರೇಷ್ಠ.
2
ತಿಳುವಳಿಕೆಯಿಲ್ಲದೆ ಕೋರುವದು ಅಯುಕ್ತ; ದುಡುಕುವ ಕಾಲು ದಾರಿ ತಪ್ಪುವದು.
3
ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.
4
ಭಾಗ್ಯವಂತನಿಗೆ ಬಹುಮಂದಿ ಸ್ನೇಹಿತರು; ಬಡವನಿಗೆ ಇದ್ದ ಸ್ನೇಹಿತನೂ ಅಗಲುವನು.
5
ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳನು.
6
ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು; ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೆ.
7
ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.
8
ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ವಿುತ್ರನು; ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
9
ಕಳ್ಳಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗುವನು.
10
ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.
11
ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ; [ಪರರ] ದೋಷವನ್ನು ಲಕ್ಷಿಸದಿರುವದು ಅವನಿಗೆ ಭೂಷಣ.
12
ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.
13
ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ.
14
ಮನೆಮಾರೂ ಆಸ್ತಿಪಾಸ್ತಿಯೂ ಪಿತೃಗಳಿಂದ ದೊರಕುವವು; ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
15
ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.
16
ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
17
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
18
ಬುದ್ಧಿ ಬರುವದೆಂದು ಮಗನನ್ನು ಶಿಕ್ಷಿಸು; ಹಾಳುಮಾಡಲು ಮನಸ್ಸುಮಾಡಬೇಡ.
19
ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ; ಬಿಡಿಸಿದರೆ ಬಾರಿಬಾರಿಗೆ ಬಿಡಿಸಬೇಕಾಗುವದು.
20
ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
21
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.
22
ಇಷ್ಟವು ಔದಾರ್ಯದ ಪ್ರಮಾಣ; [ಇದ್ದರೂ ಇಲ್ಲವೆಂದು] ಸುಳ್ಳಾಡುವವನಿಗಿಂತಲೂ ಏನೂ ಇಲ್ಲದವನೇ ಲೇಸು.
23
ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.
24
ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರಕ್ಕೆ ತರಲಾರನು.
25
ಧರ್ಮನಿಂದಕನಿಗೆ ಪೆಟ್ಟುಹೊಡೆ, [ನೋಡಿದ] ಮಂದಮತಿಯು ಜಾಣನಾಗುವನು; ವಿವೇಕಿಯನ್ನು ಗದರಿಸು, ತಾನೇ ತಿಳುವಳಿಕೆಯನ್ನು ಗ್ರಹಿಸುವನು.
26
ತಂದೆಯನ್ನು ಹೊಡೆದು ತಾಯಿಯನ್ನು ಓಡಿಸುವ ಮಗನು ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವನು.
27
ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು.
28
ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು; ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವದು.
29
ಧರ್ಮನಿಂದಕರಿಗೆ [ದಂಡನೆಯ] ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31