bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Revelation 6
Revelation 6
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 7 →
1
ಯಜ್ಞದ ಕುರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು. ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು - ಬಾ ಎಂದು ಗುಡುಗಿನಂತಿದ್ದ ಸ್ವರದಿಂದ ಹೇಳುವದನ್ನು ಕೇಳಿದನು.
2
ಆಗ ಇಗೋ, ಒಂದು ಬಿಳಿ ಕುದುರೆ ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಬಿಲ್ಲು ಇತ್ತು; ಅವನಿಗೆ ಜಯಮಾಲೆ ಕೊಡಲ್ಪಟ್ಟಿತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
3
ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು.
4
ಆಗ ಮತ್ತೊಂದು ಕುದುರೆಯು ಹೊರಟು ಬಂತು; ಅದು ಕೆಂಪು ಕುದುರೆ. ಅದರ ಮೇಲೆ ಕೂತಿದ್ದವನಿಗೆ ಭೂವಿುಯಿಂದ ಸಮಾಧಾನವನ್ನು ತೆಗೆದುಬಿಡುವದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗುವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಅವನಿಗೆ ದೊಡ್ಡ ಕತ್ತಿಯು ಕೊಡಲ್ಪಟ್ಟಿತು.
5
ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು. ಆಗ ಇಗೋ, ಕಪ್ಪು ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು.
6
ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.
7
ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು - ಬಾ ಅನ್ನುವ ಶಬ್ದವನ್ನು ಕೇಳಿದೆನು. ಆಗ ಇಗೋ, ಬೂದಿಬಣ್ಣದ ಕುದುರೆಯು ಕಾಣಿಸಿತು.
8
ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
9
ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.
10
ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.
11
ಅವರಲ್ಲಿ ಒಬ್ಬೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು. ಇದಲ್ಲದೆ - ನಿಮ್ಮ ಹಾಗೆ ಕೊಲೆಯಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆದಾಸರ ಸಂಖ್ಯೆಯೂ ಪೂರ್ಣವಾಗುವ ತನಕ ಇನ್ನೂ ಸ್ವಲ್ಪ ಕಾಲ ವಿಶ್ರವಿುಸಿಕೊಂಡಿರಬೇಕೆಂದು ಅವರಿಗೆ ಉತ್ತರವಾಯಿತು.
12
ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;
13
ಪೂರ್ಣಚಂದ್ರನು ರಕ್ತದಂತಾದನು; ಅತ್ತೀಮರವು ಬಿರುಗಾಳಿಯಿಂದ ಅಲ್ಲಾಡಿಸಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂವಿುಗೆ ಬಿದ್ದವು.
14
ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.
15
ಇದಲ್ಲದೆ ಭೂರಾಜರೂ ಪ್ರಭುಗಳೂ ಸಹಸ್ರಾಧಿಪತಿಗಳೂ ಐಶ್ವರ್ಯವಂತರೂ ಪರಾಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡು
16
ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;
17
ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 7 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22