bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
/
1 Kings 20
1 Kings 20
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 21 →
1
ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
2
ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
3
“ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ” ಎಂಬುದಾಗಿ ತಿಳಿಸಿದನು.
4
ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು.
5
ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.
6
ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.
7
ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, “ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, ‘ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು’ ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ” ಎಂದು ಹೇಳಿದನು.
8
ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು.
9
ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, “ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು” ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ಹದದನಿಗೆ ತಿಳಿಸಿದರು.
10
ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.
11
ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.
12
ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
13
ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.
14
ಅಹಾಬನು ಅವನನ್ನು, “ಇದು ಯಾರ ಮುಖಾಂತರವಾಗಿ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ” ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, “ಯುದ್ಧ ಪ್ರಾರಂಭಮಾಡತಕ್ಕವರು ಯಾರು?” ಎಂದು ಕೇಳಲು ಅವನು, “ನೀನೇ” ಎಂದು ಹೇಳಿದನು.
15
ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.
16
ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
17
ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.
18
ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.
19
ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು.
20
ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.
21
ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.
22
ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.
23
ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.
24
ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.
25
ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನು, ಕುದುರೆಗಳನ್ನೂ, ರಥಗಳನ್ನೂ ತಿರುಗಿ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ. ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ” ಎಂದು ಹೇಳಿದನು. ಅವನು ಅದರಂತೆಯೇ ಮಾಡಿದನು.
26
ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.
27
ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.
28
ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.
29
ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.
30
ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.
31
ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.
32
ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.
33
ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
34
ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು” ಎಂದು ಹೇಳಿದನು. ಆಗ ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ” ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.
35
ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
36
ಆಗ ಪ್ರವಾದಿಯು ಅವನಿಗೆ, “ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು” ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.
37
ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
38
ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.
39
ಅವನು ಹಾದು ಹೋಗುವಾಗ ಅವನಿಗೆ, “ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.
40
ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು” ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ “ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?” ಎಂದು ನುಡಿದನು.
41
ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.
42
ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
43
ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22